ಬ್ರೇಕಿಂಗ್ ನ್ಯೂಸ್
27-03-25 01:37 pm HK News Desk ಕ್ರೈಂ
ಕೋಲ್ಕತ್ತ , ಮಾ 27: ಆದಾಯ ತೆರಿಗೆ (ಐಟಿ) ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ಐವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಮಾರ್ಚ್ 18ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಂತೆ ನಟಿಸಿ ತಂಡವೊಂದು ಚಿನಾರ್ ಪಾರ್ಕ್ ಪ್ರದೇಶದಲ್ಲಿ ಮಗಳೊಂದಿಗೆ ವಾಸಿಸುತ್ತಿರುವ ವಿನಿತಾ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ದಾಳಿ ಕುರಿತು ಅನುಮಾನ ಮೂಡಿದ್ದು, ವಿನಿತಾ ಅವರು ಬಾಗುಹಾಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದರೋಡೆಕೋರರು 3 ಲಕ್ಷ ನಗದು, 25 ಲಕ್ಷ ಮೌಲ್ಯದ ಆಭರಣಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಲಿಂಕ್ ಮಾಡಲಾದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ತನಿಖೆ ಆರಂಭದಲ್ಲಿ ಕೋಲ್ಕತ್ತದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಯಿತು. ಬಳಿಕ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ಪತ್ತೆಹಚ್ಚಲಾಯಿತು.
ಅಪರಾಧದಲ್ಲಿ ಭಾಗಿಯಾಗಿರುವ ಇತರ ಶಂಕಿತರಿಗಾಗಿ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ. ವಿನಿತಾ ಅವರ ತಂದೆಯ ಮರಣದ ನಂತರ ವಿನಿತಾ ಸಿಂಗ್ ಮತ್ತು ಆಕೆಯ ಮಲತಾಯಿ ಆರತಿ ಸಿಂಗ್ ನಡುವೆ ಆಸ್ತಿ ವಿವಾದವಿತ್ತು ಎಂದು ತಿಳಿದುಬಂದಿದೆ. ಬಂಧಿತ ಸಿಐಎಸ್ಎಫ್ ಇನ್ಸ್ಪೆಕ್ಟರ್ ಜೊತೆ ಆರತಿ ಸಂಪರ್ಕ ಹೊಂದಿದ್ದು, ದರೋಡೆ ನಡೆಸಲು ಅವರನ್ನು ಸಂಪರ್ಕಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆರತಿ ಸಿಂಗ್ ಅವರನ್ನ ಕೂಡ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Five Central Industrial Security Force (CISF) personnel, including a lady constable, and three others were arrested on Wednesday for allegedly looting a house in the guise of an Income Tax raid near Kolkata on March 18, police said.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am