ಬ್ರೇಕಿಂಗ್ ನ್ಯೂಸ್
30-03-25 08:59 am Mangaluru Correspondent ಕ್ರೈಂ
ಉಳ್ಳಾಲ, ಮಾ.30: ದೇರಳಕಟ್ಟೆ ಜಂಕ್ಷನ್ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಘಟನೆ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಹೆಚ್.ಎಂ. ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಖದೀಮರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಕಳ್ಳತನ ನಡೆಸಲು ಮಳಿಗೆಯ ಬೀಗ ಒಡೆಯುತ್ತಿರುವಾಗಲೇ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದು ಇಬ್ಬರು ಆರೋಪಿಗಳಾದ ಕೇರಳದ ಕಾಂಞಂಗಾಡ್ ಮೂಲದ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಎಂಬವರು ಕಟ್ಟಡದಲ್ಲಿ ಲಾಕ್ ಆಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ.
ಮುರಳಿ ಮತ್ತು ಅಬ್ದುಲ್ ಲತೀಫ್ ಎಂಬ ಆರೋಪಿಗಳು ಕೇರಳದಲ್ಲಿ ಈ ಹಿಂದೆ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು ಎನ್ನುವ ಮಾಹಿತಿಯಿದೆ. ಕಳೆದ ಜನವರಿ ತಿಂಗಳಲ್ಲಿ ಕೆ.ಸಿ ರೋಡಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ನಲ್ಲಿ ಉತ್ಕೃಷ್ಟ ಮಟ್ಟದ ರಕ್ಷಣಾ ಸಲಕರಣೆ ಅಳವಡಿಸಿದ ಪರಿಣಾಮ ಸಂಭವನೀಯ ದರೋಡೆ ಪ್ರಕರಣವನ್ನ ವಿಫಲವಾಗಿದೆ.
ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಇನ್ಸ್ ಪೆಕ್ಟರ್ ರಾಜೇಂದ್ರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Two Arrested Red Handed in Mangalore Attempted Bank Robbery at Muthoot Finance in Derlakatte. In a brazen attempt to rob the Muthoot Finance branch in Derlakatte, police arrested two suspects red-handed while a third managed to escape during the thwarted heist. The incident unfolded when the suspects attempted to break the lock of the bank, triggering the alarm system, which alerted local authorities.
09-02-26 12:29 pm
HK News Desk
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm