ಬ್ರೇಕಿಂಗ್ ನ್ಯೂಸ್
03-04-25 01:02 pm HK News Desk ಕ್ರೈಂ
Photo credits : News18 Kannada
ಮಂಡ್ಯ, ಏ.3ವ: ಯುವತಿಯೊಬ್ಬಳು ತನ್ನ ಮದುವೆ ವಿಚಾರ ಮುಚ್ಚಿಟ್ಟು ಮತ್ತೊಬ್ಬನ ಜೊತೆ ಪ್ರೀತಿಯ ನಾಟಕವಾಡಿ ಎರಡನೇ ಮದುವೆ ಮಾಡಿಕೊಂಡು ಆತನಿಂದ ಸುಮಾರು 15 ಲಕ್ಷ ರೂ. ಹಣ ಪಡೆದು ಕೈಕೊಟ್ಟಿರುವ ಘಟನೆ ನಡೆದಿದ್ದು, ನೊಂದ ಯುವಕ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ವೈಷ್ಣವಿ ಕೆ.ಪಿ. ವಂಚನೆ ಮಾಡಿರುವ ಯುವತಿ. ಮಂಡ್ಯ ತಾಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದ ಯುವಕ ಎಂ.ಬಿ.ಶಶಿಕಾಂತ್ ವಂಚನೆಗೊಳಗಾದ ಯುವಕ.
ಶಶಿಕಾಂತ್ಗೆ ವೈಷ್ಣವಿಯ ಪರಿಚಯವಾಗಿದ್ದು, ನಂತರ ಅದು ಪ್ರೇಮಕ್ಕೆ ತಿರುಗಿದೆ. ಮಾ.24 ರಂದು ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಹಿರಿಯರ ಸಮ್ಮುಖದಲ್ಲಿ ಇಬ್ಬರು ಮದುವೆಯಾಗಿದ್ದಾರೆ. ಇದಕ್ಕೂ ಮೊದಲೇ ವೈಷ್ಣವಿಗೆ ಬೆಂಗಳೂರಿನ ಶಿವು ಎಂಬಾತನ ಜೊತೆ ಮದುವೆಯಾಗಿತ್ತು. ಆದರೆ, ಈ ವಿಚಾರ ಮುಚ್ಚಿಟ್ಟು ಶಶಿಕಾಂತ್ ಜೊತೆ ಮದುವೆಯಾಗಿದ್ದಾಳೆ. ಮದುವೆ ಮುಂಚೆ ನಾವು ಆರ್ಥಿಕ ಸದೃಢರಾಗಿಲ್ಲ ಎಂದು ಹೇಳಿ ಶಶಿಕಾಂತ್ ಬಳಿ 100 ಗ್ರಾಂ ಚಿನ್ನಾಭರಣ, 11 ಲಕ್ಷ ರೂ. ನಗದು, ತಂದೆಗೆ ಪ್ಯಾಸೆಂಜರ್ ಆಟೋ, ಬಾಡಿಗೆ ಮನೆಗೆ 50 ಸಾವಿರ ರೂ., ಮನೆಗೆ ಬೇಕಾದ ಫ್ರಿಡ್ಜ್, ವಾಷಿಂಗ್ ಮಷಿನ್, ಮೊಬೈಲ್ ಫೋನ್, 46 ಗ್ರಾಂನ ತಾಳಿ ಎಲ್ಲವನ್ನೂ ಮಾಡಿಸಿಕೊಂಡಿದ್ದಾಳೆ.
ಆದರೆ, ಮದುವೆಯ ಮಾರನೇ ದಿನ ಮಾ.25 ರಂದು ನನಗೆ ಬೇಜಾರಾಗುತ್ತಿದೆ, ಎಲ್ಲಿಯಾದರೂ ಹೊರಗಡೆ ಹೋಗೋಣ ಎಂದು ಶಶಿಕಾಂತ್ನನ್ನ ಪುಸಲಾಯಿಸಿದ ವೈಷ್ಣವಿ, ಚನ್ನಪಟ್ಟಣದ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ನನಗೆ ಬಾಯಾರಿಕೆಯಾಗುತ್ತಿದ್ದು, ಕುಡಿಯಲು ನೀರು ತರುವಂತೆ ಹೇಳಿದ್ದಾಳೆ. ಕಾರು ನಿಲ್ಲಿಸಿದ ಶಶಿಕಾಂತ್ ನೀರು ತೆಗೆದುಕೊಂಡು ಬರಲು ಹೋಗಿದ್ದಾಗ ವೈಷ್ಣವಿ ಕಾರಿನಿಂದ ಇಳಿದು ಮತ್ತೊಂದು ಕಾರು ಹತ್ತಿ ಹೊರಟು ಹೋಗಿದ್ದಾಳೆ. ನಡೆದ ವಿಚಾರವನ್ನು ಅವರ ತಂದೆ-ತಾಯಿ ಹಾಗೂ ನನ್ನ ಸಂಬಂಧಿಕರಿಗೆ ತಿಳಿಸಿದ್ದೇನೆ ಎಂದು ದೂರಿನಲ್ಲಿ ವಿವರಿಸಿದ್ದಾನೆ.
ಘಟನೆ ಬಗ್ಗೆ ಮಂಡ್ಯ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಾಗ, ಈಕೆಗೆ ಈ ಹಿಂದೆಯೇ ಎರಡು ಮದುವೆಯಾಗಿರುವ ಬಗ್ಗೆ ವಿಚಾರ ಬಯಲಾಗಿದೆ.
ಆಕೆಗೆ ಮದುವೆಯಾಗಿರುವುದನ್ನು ಅವಳ ತಂದೆ, ತಾಯಿಯೂ ನನಗೆ ತಿಳಿಸಿರಲಿಲ್ಲ. ಹಿಂದೊಮ್ಮೆ ಹಾಸನದ ರಘು ಎಂಬಾತನ ಜೊತೆ ಧರ್ಮಸ್ಥಳದಲ್ಲಿ ವಿವಾಹವಾಗಲು ಸಿದ್ಧತೆ ಮಾಡಿದ್ದಾಗಲೇ ಮದುವೆ ದಿನವೇ ಪ್ರೀತಿಸುತ್ತಿದ್ದ ಶಿವು ಎಂಬಾತನ ಜೊತೆ ಓಡಿ ಹೋಗಿ ಮದುವೆಯಾಗಿದ್ದಾಳೆ ಎಂಬುದು ತಿಳಿದುಬಂತು. ವೈಷ್ಣವಿ ಹಾಗೂ ಆಕೆಯ ತಂದೆ-ತಾಯಿ ಇದೇ ರೀತಿ ಯುವಕರಿಗೆ ಮೋಸ ಮಾಡುವ ಚಾಳಿ ಬೆಳೆಸಿಕೊಂಡಿದ್ದು ಮೋಸ ಮಾಡುವ ಉದ್ದೇಶದಿಂದ ನನಗೆ ಮದುವೆ ಮಾಡಿಸಿದ್ದಾರೆ. ದೂರು ಸ್ವೀಕರಿಸಿದ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ವೈಷ್ಣವಿ ಹಾಗೂ ತಂದೆ, ತಾಯಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
In a sensational case that has captured the attention of the local community, a woman from Mandya has been accused of cheating three men after marriage. She reportedly fled with substantial amounts of gold and cash, prompting the filing of a FIR Against her.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm