ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm