ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm