ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm