ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 03:20 pm
Mangalore Correspondent
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm