ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm