ಬ್ರೇಕಿಂಗ್ ನ್ಯೂಸ್
11-04-25 01:52 pm HK News Desk ಕ್ರೈಂ
ದಾವಣಗೆರೆ, ಏ. 11: ವ್ಯಕ್ತಿಯೋರ್ವ ತನ್ನ ಪತ್ನಿಯ ಅಗಲಿಕೆಯ ನೋವಿನಿಂದ ಹೊರಬರಲಾಗದೆ, ತನ್ನಿಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಉದಯ್ (35), ಮಕ್ಕಳಾದ ಸಿಂಧುಶ್ರೀ (06) ಹಾಗೂ ಶ್ರೀಜಯ್ (04) ಮೃತಪಟ್ಟವರು.
ಎಸ್ಪಿಎಸ್ ನಗರದ ಉದಯ್ ರಾಣೇಬೆನ್ನೂರು ಮೂಲದ ಹೇಮಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಪತ್ನಿ ಹೇಮಾ ಅನಾರೋಗ್ಯಕ್ಕೆ ಒಳಗಾಗಿ 8 ತಿಂಗಳ ಹಿಂದೆ ಸಾವನ್ನಪ್ಪಿದ್ದರು.
ಈ ಬೇಸರದಿಂದ ಹೊರಬರಲಾರದ ಪತಿ ಉದಯ್ ಮಕ್ಕಳನ್ನು ಕರೆದುಕೊಂಡು ಆಗಾಗ ಪತ್ನಿ ಸಮಾಧಿ ಬಳಿ ತೆರಳುತ್ತಿದ್ದರು. ಮನೆಯವರು ಎಷ್ಟೇ ಬುದ್ದಿ ಹೇಳಿದರೂ ಸರಿಹೋಗದ ಉದಯ್ ನಿನ್ನೆ ಕೆಲಸಕ್ಕೂ ತೆರಳದೆ ಸಂಜೆ ವೇಳೆ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಹೋದರ ಹೇಳಿದ್ದೇನು?:
'ನಾನು ಸತ್ತರೆ ಜೊತೆಗೆ ಮಕ್ಕಳನ್ನು ಕರೆತರುವೆ ಎಂದು ಉದಯ್ ಪದೇ ಪದೇ ಎನ್ನುತ್ತಿದ್ದ" ಎಂದು ಆತನ ಸಹೋದರ ಅಶೋಕ್ ತಿಳಿಸಿದ್ದಾರೆ. "ಉದಯ್ ಪತ್ನಿ ಹೇಮಾ ಅನಾರೋಗ್ಯದಿಂದ ಸಾವನಪ್ಪಿದ್ದರು. ಅದೇ ನೆನಪಿನಲ್ಲಿ ಉದಯ್ ಖಿನ್ನತೆಗೆ ಒಳಗಾಗಿದ್ದ. ಈಗ ತನ್ನ ಮಕ್ಕನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದು ದುರಂತ. ಪದೇ ಪದೇ ಮೃತ ಹೆಂಡತಿ ಹೇಮಾ ಸಮಾಧಿ ಬಳಿ ಮಕ್ಕಳನ್ನು ಕರೆದೊಯ್ಯುತ್ತಿದ್ದ. ಅವನಿಗೆ ಬುದ್ಧಿವಾದ ಹೇಳಿದ್ದರೂ ಈ ರೀತಿ ಮಾಡಿಕೊಂಡಿದ್ದಾನೆ" ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಮೃತ ಉದಯ್ ತಾಯಿ ಕಲಾವತಿ ಮಾತನಾಡಿ, "ಹೆಂಡತಿಯ ಸಾವಿನಿಂದ ಬೇಸರಗೊಂಡಿದ್ದ. ರಾತ್ರಿ ಹೇಳದೆ, ಕೇಳದೆ ಎಲ್ಲೋ ಹೋಗಿದ್ದವನನ್ನು ಹುಡುಕಿ ಕರೆತಂದಿದ್ದೆವು. ಬೆಳಗ್ಗೆ ಮಲಗುತ್ತೇನೆ ಎಂದು ಹೇಳಿ ಮಕ್ಕಳೊಂದಿಗೆ ಹೀಗೆ ಮಾಡಿಕೊಂಡಿದ್ದಾನೆ. ಮಕ್ಕಳನ್ನು ನೋಡಿದರೆ ಬಹಳ ಬೇಸರ ಆಗುತ್ತಿದೆ" ಎಂದು ದುಃಖ ವ್ಯಕ್ತಪಡಿಸಿದರು.
ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಎಸ್ಪಿ ಉಮಾಪ್ರಶಾಂತ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್ಪಿ, ''ಮೃತ ಉದಯ್ ತನ್ನ ಹೆಂಡತಿಯು ಮೃತಪಟ್ಟ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದರು. ಪತ್ನಿ ಹೇಮಾ 8 ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಮಕ್ಕಳು ಕೂಡ ತಾಯಿಯ ಬಗ್ಗೆ ಆಗಾಗ್ಗೆ ಕೇಳುತ್ತಿದ್ದರು. ಹೇಮಾರನ್ನು ಪ್ರೀತಿಸಿ ಮದುವೆಯಾಗಿದ್ದ ಉದಯ್, ಪತ್ನಿಯ ಅಗಲಿಕೆಯ ಬೇಸರದಲ್ಲಿದ್ದರು. ಉದಯ್ ತಾಯಿ ಆತನ ಮನೆಗೆ ಹೋಗಿ ನೋಡಿದಾಗ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಗಾಂಧಿನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೊಲೆ ಹಾಗೂ ಅಸಹಜ ಸಾವು ಪ್ರಕರಣಗಳನ್ನು ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ'' ಎಂದು ತಿಳಿಸಿದರು.
Distraught over his wife's death, a 32-year-old man took the lives of his two children before ending his own in Rajiv Gandhi Colony near SPS Nagar on Thursday. Uday and Hema got married at Chalageri village in Ranebennur taluk of Haveri district in 2015.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm