ಬ್ರೇಕಿಂಗ್ ನ್ಯೂಸ್
15-04-25 05:13 pm Mangalore Correspondent ಕ್ರೈಂ
ಕಾಸರಗೋಡು, ಎ.15: ಕುಡಿದು ಬಂದು ಅಂಗಡಿ ಮುಂದೆ ಗಲಾಟೆ ಮಾಡುತ್ತಿದ್ದಾನೆಂದು ದೂರು ಕೊಟ್ಟ ಸಿಟ್ಟಿನಲ್ಲಿ ವ್ಯಕ್ತಿಯೊಬ್ಬ ಥಿನ್ನರ್ ಎರಚಿ ಮಹಿಳೆಯೊಬ್ಬರಿಗೆ ಬೆಂಕಿ ಹಚ್ಚಿದ ಘಟನೆ ಕಾಸರಗೋಡು ಜಿಲ್ಲೆಯ ಬೇಡಡ್ಕ ಎಂಬಲ್ಲಿ ನಡೆದಿದ್ದು, ದೇಹದ ಅರ್ಧ ಭಾಗ ಸುಟ್ಟು ಹೋಗಿದ್ದ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎಪ್ರಿಲ್ 8ರಂದು ರಮಿತಾ (30) ಎಂಬ ಮಹಿಳೆ ಮೇಲೆ ಏಸಿಡ್ ಎರಚಿ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ದೇಹದ 50 ಶೇಕಡಾ ಭಾಗ ಸುಟ್ಟು ಹೋಗಿದ್ದರಿಂದ ಕೂಡಲೇ ಆಕೆಯನ್ನು ಕಾಞಂಗಾಡು ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆನಂತರ ಮಂಗಳೂರಿನ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಎ.14ರಂದು ಮೃತಪಟ್ಟಿದ್ದಾರೆ.
ರಮಿತಾ ಬೇಡಡ್ಕದಲ್ಲಿ ಗ್ರೋಸರಿ ಅಂಗಡಿ ನಡೆಸುತ್ತಿದ್ದರು. ಅದರ ಪಕ್ಕದಲ್ಲೇ ತಮಿಳುನಾಡು ಮೂಲದ ರಾಮಕೃತಮ್ (57) ಎಂಬ ವ್ಯಕ್ತಿ ಫರ್ನಿಚರ್ ಶಾಪ್ ಒಂದನ್ನು ನಡೆಸುತ್ತಿದ್ದ. ದಿನವೂ ಕುಡಿದು ಬಂದು ಗಲಾಟೆ ನಡೆಸುತ್ತಿದ್ದುದರಿಂದ ರಮಿತಾ ಕಟ್ಟಡದ ಮಾಲಕರಿಗೆ ದೂರು ನೀಡಿದ್ದಳು. ಇದರಿಂದ ಕಟ್ಟಡ ಮಾಲಕ ರಾಮಕೃತನಿಗೆ ಫರ್ನಿಚರ್ ಶಾಪ್ ತೆರವು ಮಾಡುವಂತೆ ಸೂಚಿಸಿದ್ದರು. ಇದರಿಂದ ಸಿಟ್ಟಿಗೆದ್ದ ರಾಮಕೃತ ಎಪ್ರಿಲ್ 8ರಂದು ಮತ್ತೆ ಕುಡಿದು ಬಂದು ಗಲಾಟೆ ಮಾಡಿದ್ದಲ್ಲದೆ, ಕೈಯಲ್ಲಿದ್ದ ಥಿನ್ನರ್ ಬಾಟಲಿಯನ್ನು ಮಹಿಳೆ ರಮಿತಾ ಮೈಮೇಲೆ ಎರಚಿದ್ದಾನೆ. ಬಳಿಕ ಬೆಂಕಿ ಹಚ್ಚಿದ್ದು ಅಂಗಡಿಗೂ ಬೆಂಕಿ ತಗಲಿತ್ತು. ಈ ವೇಳೆ, ರಮಿತಾ ತೀವ್ರ ಸುಟ್ಟ ಗಾಯಕ್ಕೀಡಾಗಿದ್ದರೆ, ಆಕೆಯ ಎಂಟು ವರ್ಷದ ಮಗ ಸ್ವಲ್ಪದರಲ್ಲಿ ಪಾರಾಗಿದ್ದ.
ಕೂಡಲೇ ರಾಮಕೃತ ಅಲ್ಲಿಂದ ಎಸ್ಕೇಪ್ ಆಗಿದ್ದು, ಬಸ್ಸಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ, ಅಂಗಡಿಗೆ ಸಾಮಗ್ರಿ ಖರೀದಿಗೆ ಬಂದಿದ್ದ ಸಜಿತಾ ಎಂಬ ಮತ್ತೊಬ್ಬ ಮಹಿಳೆ ಆರೋಪಿಯನ್ನು ಬೆನ್ನಟ್ಟಿದ್ದು, ಬಸ್ಸಿನ ಹಿಂದಕ್ಕೆ ಓಡಿ ನಿಲ್ಲಿಸಿದ್ದಾಳೆ. ಅಲ್ಲದೆ, ಬಸ್ಸಿನ ಪ್ರಯಾಣಿಕರು ಸೇರಿ ಆರೋಪಿ ರಾಮಕೃತನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
In a shocking incident reported from Bedadka in Kasargod, a 22-year-old woman who was undergoing treatment for severe burn injuries at a hospital in Mangaluru succumbed to her injuries. The victim was allegedly set on fire by a miscreant in an act of revenge after she filed a police complaint against him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm