ಬ್ರೇಕಿಂಗ್ ನ್ಯೂಸ್
18-04-25 03:41 pm Bangalore Correspondent ಕ್ರೈಂ
ಬೆಂಗಳೂರು, ಏ 18: ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿ ಬಳಿಕ ಮೃತ ನವಜಾತ ಶಿಶುವನ್ನು ಕಸದಲ್ಲಿ ಎಸೆದಿದ್ದ ಆರೋಪಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಭರತ್ (23) ಬಂಧಿತ ಆರೋಪಿ. ಈತ ಯಲಹಂಕ ನಿವಾಸಿ. ವೃತ್ತಿಯಲ್ಲಿ ಆಟೋ ಚಾಲಕ. ಎರಡು ವರ್ಷಗಳ ಹಿಂದೆ ಅಪ್ರಾಪ್ತೆಯೊಂದಿಗೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು. ಪ್ರೀತಿಯ ಸೋಗಿನಲ್ಲಿ ಅಪ್ರಾಪ್ತೆಯನ್ನು ಗರ್ಭವತಿ ಮಾಡಿದ್ದ. 9 ತಿಂಗಳ ಬಳಿಕ ಅಕ್ಕಪಕ್ಕದ ಮನೆಯವರೇ ಮಗುವನ್ನು ಡೆಲಿವರಿ ಮಾಡಿಸಿದ್ದರು. ಕಳೆದ 10 ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಹೆತ್ತ ಮಗುವನ್ನು ಕಸದೊಂದಿಗೆ ಹಾಕಿದ್ರು:
ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಅಪ್ರಾಪ್ತೆ ನವಜಾತ ಶಿಶುವನ್ನು ಕಸದ ಬ್ಯಾಗಿನಲ್ಲಿ ತುಂಬಿದ್ದಳು. ಇದಕ್ಕೆ ಆರೋಪಿ ಕುಮ್ಮಕ್ಕು ನೀಡಿದ್ದ. ಪಕ್ಕದ ಮನೆಯ ವ್ಯಕ್ತಿಗೆ ಕಸ ನೀಡಿ ಅದರ ಮೂಲಕ ಮಗುವನ್ನು ಹೊರಹಾಕುವಂತೆ ಸೂಚಿಸಿದ್ದಳು. ಮೃತ ಮಗುವಿರುವುದನ್ನು ಅರಿಯದ ವ್ಯಕ್ತಿ ಕಸ ತೆಗೆದುಕೊಂಡು ಹೋಗಿ ಖಾಸಗಿ ಆಸ್ಪತ್ರೆಯ ಬಳಿ ಖಾಲಿ ಜಾಗದಲ್ಲಿ ಹಾಕಿದ್ದ. ಕಸದಲ್ಲಿ ಮಗು ಪತ್ತೆಯಾಗುತ್ತಿದ್ದಂತೆ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದಾಗ ವ್ಯಕ್ತಿಯೋರ್ವ ಸೈಕಲ್ನಲ್ಲಿ ಬಂದು ಕವರ್ನಲ್ಲಿ ಕಸ ಹಾಕಿರುವ ಬಗ್ಗೆ ಗುಮಾನಿ ವ್ಯಕ್ತಪಡಿಸಿದ್ದರು. ಆತನನ್ನು ಪತ್ತೆ ಹಚ್ಚಿ ಪ್ರಶ್ನಿಸಿದಾಗ, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಪಕ್ಕದ ಮನೆಯವರು ಕಸ ಹಾಕುವುದಕ್ಕೆ ನೀಡಿದ್ದರು ಎಂದು ಹೇಳಿಕೆ ನೀಡಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಅಪ್ರಾಪ್ತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
BBMP workers discover body of a newborn wrapped in a blanket in garbage at Yelahanka in Bangalore. According to police reports, the newborn was identified as the child of a local minor girl who reportedly gave birth with the assistance of neighbors. Preliminary investigations suggest that following the delivery, the infant was found lifeless and subsequently discarded in the garbage.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm