ಬ್ರೇಕಿಂಗ್ ನ್ಯೂಸ್
19-04-25 11:01 am Bangalore Correspondent ಕ್ರೈಂ
ಬೆಂಗಳೂರು, ಎ.19: ಮಾಜಿ ಭೂಗತ ಡಾನ್, ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಶೂಟೌಟ್ ನಡೆಸಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ. ಮುತ್ತಪ್ಪ ರೈಗೆ ಸೇರಿದ ಬಿಡದಿಯ ನಿವಾಸದ ಆವರಣದಲ್ಲಿ ಘಟನೆ ನಡೆದಿದೆ.
ತಡರಾತ್ರಿ 12:50ರ ಸುಮಾರಿಗೆ ಮೂರು ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿ ಗುಂಡು ಹಾರಿಸಲಾಗಿದೆ. ರಿಕ್ಕಿ ರೈ ಅವರು ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ. ರಿಕ್ಕಿ ರೈ ತನ್ನ ಕಪ್ಪು ಬಣ್ಣದ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದುದರಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಹೆಚ್ಚಿನ ಅಪಾಯವಿಲ್ಲದೆ ಪಾರಾಗಿದ್ದಾರೆ.
ಎರಡು ದಿನದ ಹಿಂದಷ್ಟೇ ರಷ್ಯಾದಿಂದ ರಿಕ್ಕಿ ರೈ ವಾಪಸ್ ಆಗಿದ್ದರು. ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಬಿಸಿನೆಸ್ ನಲ್ಲಿ ಆಕ್ಟಿವ್ ಆಗಿದ್ದರು. ಕಾರು ಚಾಲಕ ರಾಜು ಗಾಯಗೊಂಡಿಲ್ಲ, ಅರವಿಂದ ಘಟನೆ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಘಟನೆ ಬಿಡದಿ ಠಾಣೆಯಲ್ಲಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ, ಮಂಗಳೂರಿನ ಉದ್ಯಮಿ ರಾಕೇಶ್ ಮಲ್ಲಿ ಹಾಗೂ ನಿತೇಶ್ ಎಸ್ಟೇಟ್ ಕಂಪನಿಯ ವಿರುದ್ಧ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.
Ricky Rai, the son of late underworld don N Muthappa Rai was allegedly shot at by unidentified assailants near his residence in Bidadi area of Karnataka's Ramanagara. Rakesh malli from Mangalore has been alleged of the conspiracy behind the shoot.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm