ಬ್ರೇಕಿಂಗ್ ನ್ಯೂಸ್
23-04-25 01:03 pm Mangalore Correspondent ಕ್ರೈಂ
ಮಂಗಳೂರು, ಎ.23 : ಉಳ್ಳಾಲದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಪೊಲೀಸರು ವಿನಾಕಾರಣ ಫಿಕ್ಸ್ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಸಿಸಿಟಿವಿ ದಾಖಲೆಗಳನ್ನು ಸಂಗ್ರಹಿಸಬೇಕೆಂದು ಹೈಕೋರ್ಟಿನಲ್ಲಿ ರಿಟ್ ಹಾಕಲಾಗಿದೆ. ವಕೀಲರಾದ ವಿಕ್ರಮ್ ರಾಜ್ ಮತ್ತು ಅಶ್ವಿನ್ ಕುಟಿನ್ಹಾರವರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ನ್ಯಾಯಾಯಲಕ್ಕೆ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಆದೇಶ ಹೊರಡಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಎಪ್ರಿಲ್ 16ರಂದು ರಾತ್ರಿ ಉಳ್ಳಾಲದಲ್ಲಿ ಗ್ಯಾಂಗ್ ರೇಪ್ ನಡೆಸಿದ್ದಾಗಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಬಂಧಿಸಲ್ಪಟ್ಟಿದ್ದ ಮನೀಶ್ ಅಂದು ಮಂಗಳೂರು ಬಿಟ್ಟು ಉಳ್ಳಾಲಕ್ಕೆ ಹೋಗಿರಲಿಲ್ಲ. ಅಲ್ಲದೆ, ಈ ಕೃತ್ಯದಲ್ಲಿ ಪಾಲ್ಗೊಂಡಿಲ್ಲ ಎಂದು ಹೇಳಿದ್ದರೂ ಪೊಲೀಸರು ಫಿಕ್ಸ್ ಮಾಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಂಗಳೂರಿನ ಕೋರ್ಟಿಗೂ ಆರೋಪಿ ಪರವಾಗಿ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿಗೆ ಪ್ರತಿಯಾಗಿ ಮಂಗಳವಾರ ಮಂಗಳೂರಿನ ಕೋರ್ಟಿಗೆ ಸರಕಾರಿ ವಕೀಲರು ಪೊಲೀಸರ ಪರವಾಗಿ ಆಕ್ಷೇಪ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಪರೋಕ್ಷವಾಗಿ ಮೂರನೇ ಆರೋಪಿ ಮನೀಶ್ ಕೃತ್ಯದಲ್ಲಿ ಪಾಲ್ಗೊಂಡಿಲ್ಲ ಎನ್ನುವ ವರದಿ ನೀಡಿದ್ದಾರೆ. ಆಮೂಲಕ ಪೊಲೀಸರು ವಿನಾಕಾರಣ ಬಂಧನ ಮಾಡಿದ್ದಾರೆಯೇ ಎಂಬ ಗಂಭೀರ ಅನುಮಾನ ಮೂಡುವಂತೆ ಮಾಡಿದೆ. ಪೊಲೀಸರ ಪರವಾಗಿ ಸರಕಾರಿ ಅಭಿಯೋಜಕರು ನೀಡಿರುವ ವರದಿಯಲ್ಲಿ, ಮೂರನೇ ಆರೋಪಿ ಮನೀಶ್ ಉಳಿದಿಬ್ಬರು ಆರೋಪಿಗಳ ಜೊತೆ ಸೇರಿ ಸಂತ್ರಸ್ತೆಗೆ ಬಿಯರ್ ಕುಡಿಸಿದ್ದು, ಆಕೆಯನ್ನು ಮುಟ್ಟಲು ಯತ್ನಿಸಿದಾಗ ಬೊಬ್ಬೆ ಹಾಕಿದ್ದಳೆಂದು ಅಲ್ಲಿಂದ ಓಡಿ ಹೋಗಿದ್ದನೆಂದು ನಮೂದಿಸಿದ್ದಾರೆ.
ಸದ್ರಿ ದೂರಿನಲ್ಲಿ ಈ ವಿಷಯ ಇಲ್ಲದಿದ್ದರೂ, ಪೊಲೀಸರು ಮೂರನೇ ಆರೋಪಿ ಪರವಾಗಿ ಈ ಮಾಹಿತಿ ನೀಡಿದ್ದಾರೆ. ಅಲ್ಲದೆ, ಅತ್ಯಾಚಾರ ಪ್ರಕರಣದಲ್ಲಿ ಆತ ಪಾಲ್ಗೊಂಡಿಲ್ಲ ಎನ್ನುವುದನ್ನು ತಿಳಿಸಿದ್ದಾರೆ. ಆಮೂಲಕ ಮನೀಶ್ ಕೃತ್ಯದಲ್ಲಿ ಪಾಲ್ಗೊಂಡಿಲ್ಲ ಎನ್ನುವುದನ್ನು ಒಪ್ಪಿರುವಂತೆ ಕಂಡುಬಂದಿದೆ ಎಂದು ಆರೋಪಿ ಪರ ವಕೀಲ ವಿಕ್ರಮ್ ರಾಜ್ ತಿಳಿಸಿದ್ದಾರೆ.
The High Court has directed local police to obtain and examine CCTV footage related to the incident of Ullal gang rape in Mangalore. This order comes amidst revelations from the police investigation that there is currently no evidence supporting the existence of a third accused in the case.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 09:50 pm
Mangalore Correspondent
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
Rahiman Murder, Senior Advocate Balan, Mangal...
14-06-25 10:21 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm