ಬ್ರೇಕಿಂಗ್ ನ್ಯೂಸ್
28-04-25 11:24 am Mangalore Correspondent ಕ್ರೈಂ
ಉಳ್ಳಾಲ,ಎ.28 : ಬೈಕ್ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ- ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (22) ಎಂಬ ಯುವಕ ಶೂಟೌಟ್ ಒಳಗಾದವರು.
ನಿನ್ನೆ ರಾತ್ರಿ ಬೈ ಕ್ ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಬಾಕ್ರಬೈಲ್ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾರೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.


ಇನ್ನೊಂದು ಮೂಲದ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸಗಿರುವ ಸಾಧ್ಯತೆ ವ್ಯಕ್ತವಾಗಿದೆ. ಬೈಕ್ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಘಟನೆ ನಡೆದ ಬಾಕ್ರಬೈಲ್ ಪ್ರದೇಶ ಕೇರಳಕ್ಕೆ ಸೇರಿದ್ದು ಮಂಜೇಶ್ವರ ಠಾಣಾ ಪೋಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
In a shocking incident near Bakrebail, Mangalore, an arecanut trader named Savad sustained a bullet injury to his leg while traveling on a bike. Savad was immediately rushed to a hospital in Deralakatte, where he is currently receiving treatment. His condition is reported to be stable.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm