ಬ್ರೇಕಿಂಗ್ ನ್ಯೂಸ್
29-04-25 09:59 pm Mangalore Correspondent ಕ್ರೈಂ
ಮಂಗಳೂರು, ಎ.29 : ಮಂಗಳೂರಿನ ಕುಡುಪು ಬಳಿಯಲ್ಲಿ ನಡೆದ ವಲಸೆ ಕಾರ್ಮಿಕನ ಹತ್ಯೆ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಘಟನೆಯ 48 ಗಂಟೆಗಳ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಅಪೂರ್ಣ ಮಾಹಿತಿ ನೀಡಿದ್ದಾರೆ. 48 ಗಂಟೆಗಳ ಬಳಿಕ ಬಂಧನ ಪ್ರಕ್ರಿಯೆ ನಡೆಸಿದ್ದು ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ಆಡಳಿತ ಕಾಂಗ್ರೆಸ್ ಪಕ್ಷದ ನಾಯಕರೇ ಆಕ್ಷೇಪ ಎತ್ತಿದ್ದಾರೆ.
ಘಟನೆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ರೀತಿಯ ಕೃತ್ಯ ಆದರೂ ಯಾಕೆ ಪೊಲೀಸ್ ಇಲಾಖೆಗೆ ಗೊತ್ತಾಗಿಲ್ಲ. ಘಟನೆ ಬಗ್ಗೆ ನಿರ್ಲಕ್ಷ ವಹಿಸಿರುವ ಸ್ಥಳೀಯ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೂಡಲೇ ಅಮಾನತು ಪಡಿಸಬೇಕು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಹುಲ್ ಹಮೀದ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತರ ಪ್ರದೇಶ ಮಾದರಿಯ ಅಮಾನವೀಯ ಗುಂಪು ಹತ್ಯೆ ಆಗಿರೋದು ಇದೇ ಮೊದಲು. 20-30 ಮಂದಿ ಸೇರಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಕ್ರಿಕೆಟ್ ಆಟದ ಸಂದರ್ಭ ವಲಸೆ ಕಾರ್ಮಿಕ ಅಲ್ಲಿ ಬಂದಿದ್ದು ಮಾತಿಗೆ ಮಾತು ಬೆಳೆದು ಆತನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ.
ವಲಸೆ ಕಾರ್ಮಿಕನ ಮೃತದೇಹದ ಮೇಲೆ ಹಲವಾರು ಗಾಯದ ಗುರುತುಗಳಿದ್ದವು. ಆದರೆ ಪೊಲೀಸರಿಗೆ ದೇಹದ ಗಾಯದ ಗುರುತು ಸಂಶಯಕ್ಕೆ ಎಡೆ ಮಾಡಲಿಲ್ಲ ಎನ್ನುವುದು ಪ್ರಶ್ನಾರ್ಥಕ. ಇದಲ್ಲದೆ, ಪ್ರಕರಣದಲ್ಲಿ ಸ್ಥಳೀಯ ಕಾರ್ಪೊರೇಟರ್ ಒಬ್ಬರ ಪತಿಯೂ ಶಾಮೀಲಾಗಿದ್ದಾರೆ. ಹೀಗಾಗಿ ಬಿಜೆಪಿ ಮುಖಂಡರು, ಸ್ಥಳೀಯ ಶಾಸಕರು ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಘಟನೆಯ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಬೇಕು. ಘಟನೆಯ ಪಾತ್ರಧಾರಿಗಳು ಮತ್ತು ಸೂತ್ರಧಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಲಾರೆನ್ಸ್ ಡಿಸೋಜ, ಸುಹೈಲ್ ಕಂದಕ್, ಆಲ್ವಿನ್ ಪ್ರಕಾಶ್, ಮುಹಮ್ಮದ್ ಬಪ್ಪಲಿಗೆ, ವಹಾಬ್ ಕುದ್ರೋಳಿ, ಹಬೀಬ್ ಕಣ್ಣೂರ್, ಬಶೀರ್ ಕಣ್ಣೂರ್, ಜಾರ್ಜ್ ಟಿ.ವಿ ಉಪಸ್ಥಿತರಿದ್ದರು.
A gruesome act of mob violence has sent shockwaves through the region, raising serious questions about the effectiveness of both the intelligence network and the local police force. In what is now being called the “Mudupi Mob Murder Case,” a group of individuals brutally lynched a man (or more, depending on the case details) in broad daylight, while authorities seemingly remained oblivious to the mounting tensions that led to the tragedy.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am