ಬ್ರೇಕಿಂಗ್ ನ್ಯೂಸ್
20-12-20 01:20 pm Mantesh, Hubli Reporter ಕ್ರೈಂ
ಹುಬ್ಬಳ್ಳಿ, ಡಿ.20: ಎಸಿಪಿ ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಠಾಣೆಯ ಪೊಲೀಸ್ ಪೇದೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ - ಧಾರವಾಡ ಸಂಚಾರಿ ವಿಭಾಗದ ಎಸಿಪಿ ಹೊಸಮನಿ, ಪೊಲೀಸ್ ಪೇದೆ ಗುರುನಾಥ ಜಗಾಪೂರ ಎಂಬವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಠಾಣೆಯೊಳಗೆ ನಡೆದಿರುವ ಕೃತ್ಯದ ಸಿಸಿಟಿವಿ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಠಾಣೆಯ ಪೊಲೀಸರೇ ಈ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಕ್ರಮ ಮರಳು ವ್ಯವಹಾರದ ವಿಚಾರದಲ್ಲಿ ಅಸಮಾಧಾನಗೊಂಡ ಎಸಿಪಿ ಸಾಹೇಬ್ರು ಪೇದೆ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಗೆ ಹೊಸ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಬಂದ ಮೇಲೆ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ ಆಯಕಟ್ಟಿನ ಜಾಗಗಳಿಗೆ ಸಂದಾಯ ಆಗುತ್ತಿದ್ದ ಮಾಮೂಲಿಗಳು ಬರುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎಸಿಪಿ ಸಾಹೇಬ್ರು ಪೇದೆಯನ್ನು ಠಾಣೆಗೆ ಕರೆಸಿಕೊಂಡು ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
ಆದರೆ, ಪೊಲೀಸ್ ಅಧಿಕಾರಿ ಯಾವುದೋ ಆಕ್ರೋಶವನ್ನು ಮುಗ್ದ ಪೊಲೀಸ್ ಪೇದೆಯ ಮೇಲೆ ತೀರಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಠಾಣೆಯಲ್ಲೇ ಪೇದೆಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸಿಪಿ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ ಎಂದು ಜನರು ಟೀಕಿಸುತ್ತಿದ್ದಾರೆ. ಅಲ್ಲದೆ, ಹಿರಿಯಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Live Video:
A video of Hubli Acp Hosmani slapping a police constable in the police station has gone viral on social media revealing the ugly face of the top cop.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm