ಬ್ರೇಕಿಂಗ್ ನ್ಯೂಸ್
20-12-20 01:20 pm Mantesh, Hubli Reporter ಕ್ರೈಂ
ಹುಬ್ಬಳ್ಳಿ, ಡಿ.20: ಎಸಿಪಿ ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಠಾಣೆಯ ಪೊಲೀಸ್ ಪೇದೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ - ಧಾರವಾಡ ಸಂಚಾರಿ ವಿಭಾಗದ ಎಸಿಪಿ ಹೊಸಮನಿ, ಪೊಲೀಸ್ ಪೇದೆ ಗುರುನಾಥ ಜಗಾಪೂರ ಎಂಬವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಠಾಣೆಯೊಳಗೆ ನಡೆದಿರುವ ಕೃತ್ಯದ ಸಿಸಿಟಿವಿ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಠಾಣೆಯ ಪೊಲೀಸರೇ ಈ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಕ್ರಮ ಮರಳು ವ್ಯವಹಾರದ ವಿಚಾರದಲ್ಲಿ ಅಸಮಾಧಾನಗೊಂಡ ಎಸಿಪಿ ಸಾಹೇಬ್ರು ಪೇದೆ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಗೆ ಹೊಸ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಬಂದ ಮೇಲೆ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ ಆಯಕಟ್ಟಿನ ಜಾಗಗಳಿಗೆ ಸಂದಾಯ ಆಗುತ್ತಿದ್ದ ಮಾಮೂಲಿಗಳು ಬರುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎಸಿಪಿ ಸಾಹೇಬ್ರು ಪೇದೆಯನ್ನು ಠಾಣೆಗೆ ಕರೆಸಿಕೊಂಡು ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
ಆದರೆ, ಪೊಲೀಸ್ ಅಧಿಕಾರಿ ಯಾವುದೋ ಆಕ್ರೋಶವನ್ನು ಮುಗ್ದ ಪೊಲೀಸ್ ಪೇದೆಯ ಮೇಲೆ ತೀರಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಠಾಣೆಯಲ್ಲೇ ಪೇದೆಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸಿಪಿ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ ಎಂದು ಜನರು ಟೀಕಿಸುತ್ತಿದ್ದಾರೆ. ಅಲ್ಲದೆ, ಹಿರಿಯಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Live Video:
A video of Hubli Acp Hosmani slapping a police constable in the police station has gone viral on social media revealing the ugly face of the top cop.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am