ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm