ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm