ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am