ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.
ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.
ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 04:31 pm
Mangalore Correspondent
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm