ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm