ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 04:31 pm
Mangalore Correspondent
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm