ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm