ಬ್ರೇಕಿಂಗ್ ನ್ಯೂಸ್
14-05-25 09:23 pm Mangaluru staff ಕ್ರೈಂ
ಮಂಗಳೂರು, ಮೇ 14: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿ ಆನಂತರ ತಲೆಮರೆಸಿಕೊಂಡಿದ್ದ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸುರತ್ಕಲ್ ಕಳವಾರು ನಿವಾಸಿ ಅಜರುದ್ದೀನ್ @ ಅಜರ್ @ ಅಜ್ಜು(29), ಕಾಪು ಬಳಿಯ ಬೆಳಪು ನಿವಾಸಿ ಅಬ್ದುಲ್ ಖಾದರ್ @ ನೌಫಲ್(24), ಫರಂಗಿಪೇಟೆ ಬಳಿಯ ಕುಂಪನಮಜಲು ನಿವಾಸಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್(39) ಬಂಧಿತರು.
ಆರೋಪಿಗಳ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿರುತ್ತದೆ. ಈತನೇ ಪ್ರಮುಖ ಆರೋಪಿಗಳಿಗೆ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ಆರೋಪಿಗಳು ಕೊಲೆ ಕೃತ್ಯದ ಬಳಿಕ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಜರುದ್ದೀನ್ ಜೈಲು ಸೇರಿದ್ದಾನೆ. ಅಬ್ದುಲ್ ಖಾದರ್ ಮತ್ತು ನೌಷದ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಎರಡೇ ದಿನದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಘಟನೆ ಸಂಬಂಧಿಸಿ ಇತರ ಆರೋಪಿಗಳನ್ನು ಬಂಧಿಸಲು ಎನ್ಐಎ ತನಿಖೆ ಮಾಡಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು.
Mangalore Suhas Shetty murder case, three more arrested by CCB police.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am