ಬ್ರೇಕಿಂಗ್ ನ್ಯೂಸ್
14-05-25 09:23 pm Mangaluru staff ಕ್ರೈಂ
ಮಂಗಳೂರು, ಮೇ 14: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿ ಆನಂತರ ತಲೆಮರೆಸಿಕೊಂಡಿದ್ದ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸುರತ್ಕಲ್ ಕಳವಾರು ನಿವಾಸಿ ಅಜರುದ್ದೀನ್ @ ಅಜರ್ @ ಅಜ್ಜು(29), ಕಾಪು ಬಳಿಯ ಬೆಳಪು ನಿವಾಸಿ ಅಬ್ದುಲ್ ಖಾದರ್ @ ನೌಫಲ್(24), ಫರಂಗಿಪೇಟೆ ಬಳಿಯ ಕುಂಪನಮಜಲು ನಿವಾಸಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್(39) ಬಂಧಿತರು.
ಆರೋಪಿಗಳ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿರುತ್ತದೆ. ಈತನೇ ಪ್ರಮುಖ ಆರೋಪಿಗಳಿಗೆ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ಆರೋಪಿಗಳು ಕೊಲೆ ಕೃತ್ಯದ ಬಳಿಕ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಜರುದ್ದೀನ್ ಜೈಲು ಸೇರಿದ್ದಾನೆ. ಅಬ್ದುಲ್ ಖಾದರ್ ಮತ್ತು ನೌಷದ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಎರಡೇ ದಿನದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಘಟನೆ ಸಂಬಂಧಿಸಿ ಇತರ ಆರೋಪಿಗಳನ್ನು ಬಂಧಿಸಲು ಎನ್ಐಎ ತನಿಖೆ ಮಾಡಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು.
Mangalore Suhas Shetty murder case, three more arrested by CCB police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm