ಬ್ರೇಕಿಂಗ್ ನ್ಯೂಸ್
15-05-25 11:06 pm HK News Desk ಕ್ರೈಂ
ದಾವಣಗೆರೆ, ಮೇ 14 : ಗೋಲ್ಡ್ ಲೋನ್ ಆಫೀಸರ್ ಒಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ಗೇ ಕನ್ನ ಹಾಕಿ, ಕೆಜಿಗಟ್ಟಲೆ ಚಿನ್ನಾಭರಣಗಳನ್ನು ಕದ್ದು ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿರುವಂತಹ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ಎಂಬಾತ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.
ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಚಿನ್ನಾಭರಣವನ್ನು ಕದ್ದು, ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ.
ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಮ್ಯಾನೇಜರ್ ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ಅಡವಿಟ್ಟಿದ್ದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವರದಿಗಳ ಪ್ರಕಾರ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಡುತ್ತಿದ್ದ. ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ಆತ ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್ನಲ್ಲೇ ಕಳೆದಿದ್ದಾನೆ ಎಂದು ತಿಳಿದು ಬಂದಿದೆ.
Addicted to Online Gaming, SBI Staff Steals Gold from Bank and Pledges it Elsewhere; 2.61 Crore Worth gold Seized, Accused Nabbed. The arrested has been identified as Devraj.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm