ಬ್ರೇಕಿಂಗ್ ನ್ಯೂಸ್
            
                        19-05-25 03:35 pm HK News Desk ಕ್ರೈಂ
            ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
            
            
            Shocking Belagavi Crime, Mother in law Kills Daughter in law for Not Having Children, Tries to Fake Accident.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm