ಬ್ರೇಕಿಂಗ್ ನ್ಯೂಸ್
            
                        23-05-25 10:02 am Mangalore Correspondent ಕ್ರೈಂ
            ಮಂಗಳೂರು, ಮೇ 23 : ಮದುವೆ ಸಂಬಂಧದಲ್ಲಿ ಬಿರುಕು ಉಂಟಾದ ಕೋಪದಲ್ಲಿ ಮದುವೆ ಗಂಡು ಬ್ರೋಕರ್ ವ್ಯಕ್ತಿಯನ್ನೇ ಕತ್ತಿಯಿಂದ ಕಡಿದು ಕೊಲೆಗೈದ ದಾರುಣ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ನಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ಸುಲೇಮಾನ್ (50) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ತಲವಾರಿನಿಂದ ಕಡಿದು ಕೊಲೆಗೈದ ವಳಚ್ಚಿಲ್ ನಿವಾಸಿ ಮುಸ್ತಫಾ (30) ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಬ್ರೋಕರ್ ಆಗಿದ್ದ ಸುಲೇಮಾನ್ ತನ್ನ ಸಂಬಂಧಿಕ ಯುವತಿಯನ್ನು ಎಂಟು ತಿಂಗಳ ಹಿಂದೆ ಮುಸ್ತಫಾಗೆ ಮದುವೆ ಮಾಡಿಸಿದ್ದ. ಮದುವೆ ನಂತರ ಕುಟುಂಬ ಜಗಳ ಉಂಟಾಗಿದ್ದು ವೈಮನಸ್ಸಿನಿಂದ ಎರಡು ತಿಂಗಳ ಹಿಂದೆ ಪತ್ನಿ ಮುಸ್ತಫಾನನ್ನು ಬಿಟ್ಟು ಹೋಗಿದ್ದಳು. ಇದರ ಕೋಪದಲ್ಲಿ ಸುಲೇಮಾನ್ ಮತ್ತು ಮುಸ್ತಫಾ ನಡುವೆ ಜಗಳ ಆಗಿತ್ತು.
ನಿನ್ನೆ ರಾತ್ರಿ ಮಾತುಕತೆಗೆಂದು ಆರೋಪಿ ಮುಸ್ತಫಾ, ಸುಲೇಮಾನನ್ನು ತನ್ನ ಮನೆಗೆ ಕರೆಸಿಕೊಂಡಿದ್ದ. ಹರೆಯದ ಇಬ್ಬರು ಮಕ್ಕಳ ಜೊತೆಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮುಸ್ತಫಾ ಮನೆಗೆ ಬಂದಿದ್ದ ಸುಲೇಮಾನ್, ಮನೆಯ ಹೊರಗಡೆ ಮಕ್ಕಳನ್ನು ನಿಲ್ಲಿಸಿ ಮಾತುಕತೆ ನಡೆಸುತ್ತಿದ್ದ. ಆನಂತರ, ಮಾತುಕತೆ ವಿಫಲವಾಯ್ತು, ನಾವು ಮರಳಿ ಹೋಗೋಣ ಎಂದು ಹೇಳುತ್ತ ಬಿರುಸಿನಿಂದ ಸುಲೇಮಾನ್ ಹಿಂದಕ್ಕೆ ಬರುತ್ತಿದ್ದಾಗಲೇ ಕತ್ತಿ ಹಿಡಿದು ಅಟ್ಟಿಸಿಕೊಂಡು ಬಂದ ಮುಸ್ತಫಾ ನೇರವಾಗಿ ಸುಲೇಮಾನ್ ಕುತ್ತಿಗೆ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಏಟಿಗೊಳಗಾದ ಸುಲೇಮಾನ್ ಸ್ಥಳದಲ್ಲೇ ಕುಸಿದು ಬಿದ್ದರೆ, ತಡೆಯಲು ಬಂದ ಮಕ್ಕಳಾದ ಸಿಯಾಬ್ ಮತ್ತು ರಿಯಾಬ್ ಮೇಲೂ ಆರೋಪಿ ತಲವಾರು ಬೀಸಿದ್ದಾನೆ. ಸಿಯಾಬ್ ಎದೆಗೆ ಗಾಯವಾಗಿದ್ದರೆ, ರಿಯಾಬ್ ಬಲಗೈಯ ಅಂಗೈಗೆ ಏಟು ಬಿದ್ದಿದೆ. ಸ್ಥಳೀಯರು ಕೂಡಲೇ ಇವರನ್ನು ಅಡ್ಯಾರ್ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಸುಲೇಮಾನ್ ಸಾವನ್ನಪ್ಪಿದ್ದಾರೆ. ಆರೋಪಿ ಮುಸ್ತಫಾನನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
            
            
            50 year old murdered at Valachil over marriage dispute in Mangalore. The deceased has been identified as Suleman. Preliminary investigation reveals that the deceased Suleman, who worked as a marriage broker, had facilitated the marriage of the accused Mustafa (30), a relative, with a woman named Shaheenaz about eight months ago. Due to subsequent marital discord, Shaheenaz had returned to her parental home two months prior to the incident, leading to tension between Mustafa and Suleman.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm