ಬ್ರೇಕಿಂಗ್ ನ್ಯೂಸ್
23-05-25 10:02 am Mangalore Correspondent ಕ್ರೈಂ
ಮಂಗಳೂರು, ಮೇ 23 : ಮದುವೆ ಸಂಬಂಧದಲ್ಲಿ ಬಿರುಕು ಉಂಟಾದ ಕೋಪದಲ್ಲಿ ಮದುವೆ ಗಂಡು ಬ್ರೋಕರ್ ವ್ಯಕ್ತಿಯನ್ನೇ ಕತ್ತಿಯಿಂದ ಕಡಿದು ಕೊಲೆಗೈದ ದಾರುಣ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ನಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ಸುಲೇಮಾನ್ (50) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ತಲವಾರಿನಿಂದ ಕಡಿದು ಕೊಲೆಗೈದ ವಳಚ್ಚಿಲ್ ನಿವಾಸಿ ಮುಸ್ತಫಾ (30) ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಬ್ರೋಕರ್ ಆಗಿದ್ದ ಸುಲೇಮಾನ್ ತನ್ನ ಸಂಬಂಧಿಕ ಯುವತಿಯನ್ನು ಎಂಟು ತಿಂಗಳ ಹಿಂದೆ ಮುಸ್ತಫಾಗೆ ಮದುವೆ ಮಾಡಿಸಿದ್ದ. ಮದುವೆ ನಂತರ ಕುಟುಂಬ ಜಗಳ ಉಂಟಾಗಿದ್ದು ವೈಮನಸ್ಸಿನಿಂದ ಎರಡು ತಿಂಗಳ ಹಿಂದೆ ಪತ್ನಿ ಮುಸ್ತಫಾನನ್ನು ಬಿಟ್ಟು ಹೋಗಿದ್ದಳು. ಇದರ ಕೋಪದಲ್ಲಿ ಸುಲೇಮಾನ್ ಮತ್ತು ಮುಸ್ತಫಾ ನಡುವೆ ಜಗಳ ಆಗಿತ್ತು.
ನಿನ್ನೆ ರಾತ್ರಿ ಮಾತುಕತೆಗೆಂದು ಆರೋಪಿ ಮುಸ್ತಫಾ, ಸುಲೇಮಾನನ್ನು ತನ್ನ ಮನೆಗೆ ಕರೆಸಿಕೊಂಡಿದ್ದ. ಹರೆಯದ ಇಬ್ಬರು ಮಕ್ಕಳ ಜೊತೆಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮುಸ್ತಫಾ ಮನೆಗೆ ಬಂದಿದ್ದ ಸುಲೇಮಾನ್, ಮನೆಯ ಹೊರಗಡೆ ಮಕ್ಕಳನ್ನು ನಿಲ್ಲಿಸಿ ಮಾತುಕತೆ ನಡೆಸುತ್ತಿದ್ದ. ಆನಂತರ, ಮಾತುಕತೆ ವಿಫಲವಾಯ್ತು, ನಾವು ಮರಳಿ ಹೋಗೋಣ ಎಂದು ಹೇಳುತ್ತ ಬಿರುಸಿನಿಂದ ಸುಲೇಮಾನ್ ಹಿಂದಕ್ಕೆ ಬರುತ್ತಿದ್ದಾಗಲೇ ಕತ್ತಿ ಹಿಡಿದು ಅಟ್ಟಿಸಿಕೊಂಡು ಬಂದ ಮುಸ್ತಫಾ ನೇರವಾಗಿ ಸುಲೇಮಾನ್ ಕುತ್ತಿಗೆ ಭಾಗಕ್ಕೆ ಕಡಿದಿದ್ದಾನೆ.
ಗಂಭೀರ ಏಟಿಗೊಳಗಾದ ಸುಲೇಮಾನ್ ಸ್ಥಳದಲ್ಲೇ ಕುಸಿದು ಬಿದ್ದರೆ, ತಡೆಯಲು ಬಂದ ಮಕ್ಕಳಾದ ಸಿಯಾಬ್ ಮತ್ತು ರಿಯಾಬ್ ಮೇಲೂ ಆರೋಪಿ ತಲವಾರು ಬೀಸಿದ್ದಾನೆ. ಸಿಯಾಬ್ ಎದೆಗೆ ಗಾಯವಾಗಿದ್ದರೆ, ರಿಯಾಬ್ ಬಲಗೈಯ ಅಂಗೈಗೆ ಏಟು ಬಿದ್ದಿದೆ. ಸ್ಥಳೀಯರು ಕೂಡಲೇ ಇವರನ್ನು ಅಡ್ಯಾರ್ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಸುಲೇಮಾನ್ ಸಾವನ್ನಪ್ಪಿದ್ದಾರೆ. ಆರೋಪಿ ಮುಸ್ತಫಾನನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
50 year old murdered at Valachil over marriage dispute in Mangalore. The deceased has been identified as Suleman. Preliminary investigation reveals that the deceased Suleman, who worked as a marriage broker, had facilitated the marriage of the accused Mustafa (30), a relative, with a woman named Shaheenaz about eight months ago. Due to subsequent marital discord, Shaheenaz had returned to her parental home two months prior to the incident, leading to tension between Mustafa and Suleman.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am