ಬ್ರೇಕಿಂಗ್ ನ್ಯೂಸ್
29-05-25 06:38 pm Mangaluru Correspondent ಕ್ರೈಂ
ಮಂಗಳೂರು, ಮೇ 29: ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಪ್ರಕಟಣೆ ಹೊರಡಿಸಿದ್ದು, ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪೃಥ್ವಿರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರನ್ನು ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ತಿಳಿಸಿದ್ದಾರೆ.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ತನಿಖಾಧಿಕಾರಿಯಾಗಿದ್ದು, ಇವರ ನೇತೃತ್ವದಲ್ಲಿ ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು ಮೇ 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೀಪಕ್, ಸುಮಿತ್ ಮತ್ತು 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಬ್ದುಲ್ ರಹಿಮಾನ್ ಬೆಂಜನಪದವು ಬಳಿಯ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದಾಗ ಎರಡು ಸ್ಕೂಟರ್ ನಲ್ಲಿ ಬಂದಿದ್ದವರು ತಲವಾರು ದಾಳಿ ನಡೆಸಿದ್ದರು. ಅಬ್ದುಲ್ ರಹಿಮಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
ಆರೋಪಿಗಳು ಪರಿಚಿತರೇ ಆಗಿದ್ದು ಹಳೆ ದ್ವೇಷವೇ ಅಥವಾ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರಕ್ಕಾಗಿ ಕೊಲೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇತರ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Bantwal Abdul Rahiman Murder Case, Police Confirm Arrest of Three Accused
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am