ಬ್ರೇಕಿಂಗ್ ನ್ಯೂಸ್
29-05-25 11:04 pm Mangalore Correspondent ಕ್ರೈಂ
ಮಂಗಳೂರು, ಮೇ 29 : ಕೋಮು ವೈಷಮ್ಯದ ಕೊಲೆ, ಗಲಾಟೆ ನಡುವೆಯೇ ಬಂಟ್ವಾಳದ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್- ಇ -ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬಂದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಬಂದಿದ್ದು ಹಿಂದಿಯಲ್ಲಿ ವಾಟ್ಸಪ್ ಮೆಸೇಜ್ ಬಂದಿದೆ. ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.


ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆಗೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿಲ್ಲ ಎಂದು ಬರೆದಿದ್ದಾರೆ.
ನಿನ್ನ ಕೊಂದ ರೀತಿ ಹೇಗಿರಬೇಕು ಅಂದ್ರೆ, ಅದನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಕೂಡ ಮುಗಿಸಲಾಗುವುದು. ಇದು ಜೈಶ್ ಮುಜಾಹಿದೀನ್ ಸಂಘಟನೆಯ ಸಂದೇಶ ಎಂದು ಜೀವ ಬೆದರಿಕೆ ಆಡಿಯೋದಲ್ಲಿ ಹೇಳಿದ್ದಾರೆ.
ಸಿರಿಯಾ ,ಪಾಕಿಸ್ತಾನ, ಅಫಘಾನಿಸ್ತಾನ, ಸೌದಿ ಅರೇಬಿಯಾದ ಮೊಬೈಲ್ ಸಂಖ್ಯೆಗಳಿಂದ ಮೆಸೇಜ್ ಬಂದಿದ್ದು ಇದರ ಹಿಂದೆ ಸ್ಥಳೀಯರೇ ಉಗ್ರರ ಸಂಪರ್ಕ ಇರುವವರು ಇದ್ದಾರೆ. ಇಲ್ಲದೇ ಇದ್ದರೆ ನಮ್ಮ ಮೊಬೈಲ್ ಸಂಖ್ಯೆ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಎನ್ಐಎ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ ಎಂದು ಜೀವ ಬೆದರಿಕೆ ಬಗ್ಗೆ ಬಂಟ್ವಾಳ ಪೊಲೀಸರಿಗೆ ನೀಡಿದ ದೂರಿನಲ್ಲಿ ನರಸಿಂಹ ಮಾಣಿ ತಿಳಿಸಿದ್ದಾರೆ.
Mangalore Hindu Organization Leaders Receive Death Threats in the Name of Jaish e Mohammed, Message Says 'Only Allah Knows How We'll Kill You'
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm