ಬ್ರೇಕಿಂಗ್ ನ್ಯೂಸ್
29-05-25 11:04 pm Mangalore Correspondent ಕ್ರೈಂ
ಮಂಗಳೂರು, ಮೇ 29 : ಕೋಮು ವೈಷಮ್ಯದ ಕೊಲೆ, ಗಲಾಟೆ ನಡುವೆಯೇ ಬಂಟ್ವಾಳದ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್- ಇ -ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬಂದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಬಂದಿದ್ದು ಹಿಂದಿಯಲ್ಲಿ ವಾಟ್ಸಪ್ ಮೆಸೇಜ್ ಬಂದಿದೆ. ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.


ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆಗೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿಲ್ಲ ಎಂದು ಬರೆದಿದ್ದಾರೆ.
ನಿನ್ನ ಕೊಂದ ರೀತಿ ಹೇಗಿರಬೇಕು ಅಂದ್ರೆ, ಅದನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಕೂಡ ಮುಗಿಸಲಾಗುವುದು. ಇದು ಜೈಶ್ ಮುಜಾಹಿದೀನ್ ಸಂಘಟನೆಯ ಸಂದೇಶ ಎಂದು ಜೀವ ಬೆದರಿಕೆ ಆಡಿಯೋದಲ್ಲಿ ಹೇಳಿದ್ದಾರೆ.
ಸಿರಿಯಾ ,ಪಾಕಿಸ್ತಾನ, ಅಫಘಾನಿಸ್ತಾನ, ಸೌದಿ ಅರೇಬಿಯಾದ ಮೊಬೈಲ್ ಸಂಖ್ಯೆಗಳಿಂದ ಮೆಸೇಜ್ ಬಂದಿದ್ದು ಇದರ ಹಿಂದೆ ಸ್ಥಳೀಯರೇ ಉಗ್ರರ ಸಂಪರ್ಕ ಇರುವವರು ಇದ್ದಾರೆ. ಇಲ್ಲದೇ ಇದ್ದರೆ ನಮ್ಮ ಮೊಬೈಲ್ ಸಂಖ್ಯೆ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಎನ್ಐಎ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ ಎಂದು ಜೀವ ಬೆದರಿಕೆ ಬಗ್ಗೆ ಬಂಟ್ವಾಳ ಪೊಲೀಸರಿಗೆ ನೀಡಿದ ದೂರಿನಲ್ಲಿ ನರಸಿಂಹ ಮಾಣಿ ತಿಳಿಸಿದ್ದಾರೆ.
Mangalore Hindu Organization Leaders Receive Death Threats in the Name of Jaish e Mohammed, Message Says 'Only Allah Knows How We'll Kill You'
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm