ಬ್ರೇಕಿಂಗ್ ನ್ಯೂಸ್
09-08-20 06:52 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 10: ಹಣ ಎಂದರೆ ಹೆಣವೂ ಬಾಯಿ ಬಿಡುತ್ತೆ ಅಂತಾರೆ. ಇನ್ನು ಸಂಬಂಧಗಳ ಬಗ್ಗೆ ಬೇರೆ ಹೇಳ ಬೇಕಾಗಿಲ್ಲ. ಹಣದ ಮುಂದೆ ಯಾವ ಸಂಬಂಧಕ್ಕೂ ಇಂದು ಬೆಲೆ ಇಲ್ಲದಂತಾಗಿದೆ. 3 ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ತಂದೆಯನ್ನೇ ಮಕ್ಕಳು ಬೀದಿಗೆ ತಳ್ಳಿದ ಹೃದಯ ವಿದ್ರಾವಕ ಘಟನೆ ಸಿದ್ದಿಪೇಟ್ ಎಂಬಲ್ಲಿ ನಲ್ಲಿ ಬೆಳಕಿಗೆ ಬಂದಿದೆ.
ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ ತಂದೆಯನ್ನು ಬೀದಿಗೆ ತಳ್ಳಿ ಅವರ ಹೆಸರಿನಲ್ಲಿದ್ದ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಂಚಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಎಂಬಲ್ಲಿ ನಡೆದಿದೆ.
ಕೊನೆಗೆ ಅಣ್ಣತಮ್ಮಂದಿರು ವಯಸ್ಸಾದ ಅಪ್ಪನ ಜವಾಬ್ದಾರಿ ಹೊರಲು ನಿರಾಕರಿಸಿ ಬೀದಿಗೆ ತಳ್ಳಿದ್ದಾರೆ. ಬೀದಿಗೆ ಬಿದ್ದ ವೃದ್ಧರಿಗೆ ಗ್ರಾಮದ ಜನರು ಊಟ ಕೊಡಲು ಮುಂದಾದರೆ, ಕೊಡದಂತೆ ಅವರನ್ನೂ ಬೆದರಿಸಿದ್ದ ಅವರ ಗತಿ ಏನಾಯಿತು ನೋಡಿ.
ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಗ್ರಾಮದ ಪೋತು ಸುಧಾಕರ್ (45), ಪೋತು ಜನಾರ್ದನ (48) ಮತ್ತು ಪೋತು ರವೀಂದರ್ (52) ಈ ಅಮಾನವೀಯ ಕೃತ್ಯ ಎಸಗಿದ್ದಾರೆ.
ಇದೀಗ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಈ ಮೂವರ ತಂದೆ ಪೋತು ಮಲ್ಲಯ್ಯ (79) ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೋತು ಮಲ್ಲಯ್ಯ ಅವರು ತಮ್ಮ ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾಡಿದ್ದರು. ಅಲ್ಲದೆ, 6 ಎಕರೆ ಭೂಮಿಯನ್ನು ಪತ್ನಿಯ ಹೆಸರಿಗೆ ನೋಂದಾಯಿಸಿಕೊಟ್ಟಿದ್ದರು. ಸಾಕಷ್ಟು ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಮಾಡಿಸಿದ್ದರು. ಈ ಎಲ್ಲ ಆಸ್ತಿ ಮತ್ತು ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಅವರ ಮೂವರೂ ಮಕ್ಕಳು ಸಮನಾಗಿ ಹಂಚಿಕೊಂಡಿದ್ದರು. ಆದರೆ, ಭೂಮಿ ತಾಯಿಯ ಹೆಸರಿನಲ್ಲಿ ಇದ್ದುದರಿಂದ ಅವರಿಗೆ ಏನೂ ಮಾಡಲಾಗಿರಲಿಲ್ಲ.
ಆಸ್ತಿ ಎಲ್ಲವೂ ತಮ್ಮ ಹೆಸರಿಗೆ ನೋಂದಾಣಿಯಾಗುತ್ತಲೇ ಬಾಲ ಬಿಚ್ಚಿದ ‘ವರ’ಪುತ್ರರು, ತಮ್ಮ ತಂದೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಒಬ್ಬೊಬ್ಬರಾಗಿ ನಿರಾಕರಿಸುತ್ತಾ ಮನೆಯಿಂದ ಹೊರಹಾಕಿದರು.
ಕೊನೆಗೆ ಗ್ರಾಮದಲ್ಲಿ ಬೀದಿ, ಬೀದಿ ಅಲೆಯುತ್ತಾ, ಬೀದಿ ಬದಿಯ ಜಗಲಿಯ ಮೇಲೆ ಮಲಗಿಕೊಳ್ಳುತ್ತಿದ್ದ ವೃದ್ಧ ಮಲ್ಲಯ್ಯ ಅವರಿಗೆ ಗ್ರಾಮಸ್ಥರು ಊಟ ಕೊಟ್ಟು ಸಮಾಧಾನಪಡಿಸುತ್ತಿದ್ದರು. ಆದರೆ, ತಮ್ಮ ತಂದೆಗೆ ಊಟ ಕೊಟ್ಟವರೊಂದಿಗೆ ಜಗಳಕ್ಕಿಳಿಯುತ್ತಿದ್ದ ಈ ಕುಲ ಪುತ್ರರು ಊಟ ಕೊಡದಂತೆ ತಾಕೀತು ಮಾಡುತ್ತಿದ್ದರು.
ಮಲ್ಲಯ್ಯ ಅವರ ಪರಿಸ್ಥಿತಿಯ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಇದನ್ನು ಆಧರಿಸಿ ಪೊಲೀಸರು ಮೂವರು ಪುತ್ರರನ್ನು ಬಂಧಿಸಿ, ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕ್ಷೇಮಾಭಿವೃದ್ಧಿ ಕಾಯ್ದೆ, 2007ರ 24ನೇ ವಿಧಿ ಮತ್ತು ಐಪಿಸಿ 420ರ ಪ್ರಕಾರ ಆರೋಪ ಹೊರಿಸಿ ಬಂಧಿತರನ್ನು ಹುಜುರಾಬಾದ್ ಜೈಲಿನಲ್ಲಿ ಇರಿಸಲಾಗಿದೆ .
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm