ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm