ಬ್ರೇಕಿಂಗ್ ನ್ಯೂಸ್
08-06-25 10:29 pm HK News Desk ಕ್ರೈಂ
ಫರೀದಾಬಾದ್, ಜೂನ್.8: ಎಂಬಿಬಿಎಸ್ ಡಿಗ್ರಿ ಪೂರೈಸಿದ್ದ ಡಾಕ್ಟರ್ ಒಬ್ಬ ತನ್ನನ್ನು ಕಾರ್ಡಿಯೋಲಜಿಸ್ಟ್ ಎಂದು ನಕಲಿ ಸರ್ಟಿಫಿಕೇಟ್ ರೆಡಿ ಹೇಳಿಕೊಂಡು ಖಾಸಗಿ ಆಸ್ಪತ್ರೆಗೆ ಸೇರಿಕೊಂಡಿದ್ದಲ್ಲದೆ, ಕೇವಲ ಎಂಟು ತಿಂಗಳಲ್ಲಿ 50ಕ್ಕೂ ಹೆಚ್ಚು ಹಾರ್ಟ್ ಆಪರೇಶನ್ ಮಾಡಿರುವ ಪ್ರಸಂಗ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಪಂಕಜ್ ಮೋಹನ್ ಶರ್ಮಾ ಎಂಬಾತ ಈ ರೀತಿ ನಕಲಿ ಸರ್ಟಿಫಿಕೇಟ್ ಮಾಡಿಕೊಂಡು ಪೋಸು ಕೊಟ್ಟಾತ. ಕಳೆದ ಎಪ್ರಿಲ್ 11ರಂದು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಂಜಯ್ ಗುಪ್ತಾ ಪೊಲೀಸರಿಗೆ ದೂರು ನೀಡಿ, ಪಂಕಜ್ ಶರ್ಮಾನ ವೈದ್ಯಕೀಯ ದಾಖಲೆ ಬಗ್ಗೆ ತನಿಖೆ ಮಾಡುವಂತೆ ಆಗ್ರಹ ಮಾಡಿದ್ದರು. ಇದರಂತೆ ಪೊಲೀಸರು ತನಿಖೆ ನಡೆಸಿದಾಗ, ವೈದ್ಯನ ನಕಲಿತನ ಬಯಲಾಗಿದೆ.
ತನಿಖೆಯ ಸಂದರ್ಭದಲ್ಲಿ ಪಂಕಜ್ ಶರ್ಮಾ ತನ್ನ ನೋಂದಣಿ ಸಂಖ್ಯೆ 2456 ಎಂದು ತಿಳಿಸಿದ್ದ. ಅದರ ಬಗ್ಗೆ ಶೋಧ ನಡೆಸಿದಾಗ, ಡಾ.ಪಂಕಜ್ ಮೋಹನ್ ಎಂಬ ಹೆಸರನ್ನು ಹೊಂದಿದ್ದ ಬೇರೆಯದ್ದೇ ಕಾರ್ಡಿಯೋಲಜಿಸ್ಟ್ ಒಬ್ಬರ ನೋಂದಣಿ ಸಂಖ್ಯೆಯಾಗಿತ್ತು. ಪಂಕಜ್ ಶರ್ಮಾ ಕೇವಲ ಜನರಲ್ ಫಿಸೀಶಿಯನ್ ಮಾತ್ರ ಆಗಿದ್ದು, ಆತನ ನೋಂದಣಿ ಸಂಖ್ಯೆ 28482 ಎಂಬುದಾಗಿತ್ತು. ಪಂಕಜ್ ಶರ್ಮಾ 2024ರ ಜುಲೈ ತಿಂಗಳಲ್ಲಿ ಮೆಡಿಟರ್ನಿಯಾ ಹಾಸ್ಪಿಟಲ್ ಅಧೀನದ ಫರೀದಾಬಾದ್ ನಲ್ಲಿರುವ ಬಾದ್ ಶಾ ಖಾನ್ ಸಿವಿಲ್ ಆಸ್ಪತ್ರೆಯಲ್ಲಿ ಕಾರ್ಡಿಯೋಲಜಿಸ್ಟ್ ಆಗಿ ಸೇರ್ಪಡೆಯಾಗಿದ್ದ. ಕಾರ್ಡಿಯೋಲಜಿ ಬಗ್ಗೆ ಕಲಿತಿರದಿದ್ದರೂ, ಕಾರ್ಡಿಯೋಲಜಿ ಎಂಡಿ ಮತ್ತು ಡಿಎನ್ ಬಿ ಎಂದು ತನ್ನ ಹೆಸರಿನೊಂದಿಗೆ ನಮೂದಿಸಿಕೊಂಡಿದ್ದ.
ನಕಲಿ ಡಾಕ್ಟರ್ ಬಗ್ಗೆ ಸುದ್ದಿಯಾಗುತ್ತಿದ್ದಂತೆ ರಿಯಲ್ ಡಾಕ್ಟರ್ ಡಾ.ಪಂಕಜ್ ಮೋಹನ್ ತನ್ನ ನೋದಣಿ ಸಂಖ್ಯೆಯನ್ನು ದುರುಪಯೋಗ ಮಾಡಿದ್ದಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ನಿಗೆ ದೂರು ನೀಡಿದ್ದಾರೆ. ಅಲ್ಲದೆ, ಆರೋಪಿತ ಪಂಕಜ್ ಶರ್ಮಾಗೆ ಲೀಗಲ್ ನೋಟೀಸ್ ಕೂಡ ನೀಡಿದ್ದಾರೆ. ಆಬಳಿಕ ಆಸ್ಪತ್ರೆಗೆ ಬರುತ್ತಿದ್ದ ರೋಗಿ ಮತ್ತು ಸಂಬಂಧಿಕರು ಕೂಡ ಪಂಕಜ್ ಶರ್ಮಾ ಸರ್ಟಿಫಿಕೇಟ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಆಸ್ಪತ್ರೆ ಆಡಳಿತ ಮಂಡಳಿಯೇ ಪಂಕಜ್ ಶರ್ಮಾನನ್ನು ತೆಗೆದು ಹಾಕಿತ್ತು.
A doctor with only an MBBS degree allegedly posed as a cardiologist and conducted over 50 heart procedures in eight months at Badshah Khan Civil Hospital in Faridabad.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm