ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.

ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm