ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.

ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm