ಬ್ರೇಕಿಂಗ್ ನ್ಯೂಸ್
11-06-25 02:03 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 11 : ಅಡಿಕೆ ಖರೀದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಂಟ್ವಾಳ ಆಸುಪಾಸಿನ 50ಕ್ಕು ಹೆಚ್ಚು ರೈತರಿಂದ ಅಡಿಕೆ ಖರೀದಿಸಿ ಹಣ ಕೊಡದೆ ಕೋಟ್ಯಾಂತರ ರೂಪಾಯಿ ಮೋಸ ಮಾಡಿ ಪರಾರಿಯಾಗಿದ್ದು ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಎ.ಬಿ. ಸುಪಾರಿ ಎಂಬ ಅಂಗಡಿ ಹೊಂದಿರುವ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್ ಮಹಮ್ಮದ್ ಪರಾರಿಯಾದ ಆರೋಪಿ. 50ಕ್ಕೂ ಅಧಿಕ ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದು, ರೈತರು ಬಂಟ್ವಾಳ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರವೀಣ್ ಡಿ ಸೋಜಾ (45) ಎಂಬವರು ದೂರು ದಾಖಲಿಸಿದ್ದು ಕಳೆದ ಮಾರ್ಚ್ 8 ರಂದು ನೌಫಲ್ ಮಹಮ್ಮದ್ ಅವರ ಎ.ಬಿ ಸುಪಾರಿ ಅಂಗಡಿಗೆ ವಾಹನದಲ್ಲಿ ಹೋಗಿ ಸುಮಾರು 6.5 ಕ್ವಿಂಟಾಲ್ ಅಡಿಕೆಯನ್ನು ಮಾರಾಟ ಮಾಡಿದ್ದು ಅದರ ಮೌಲ್ಯ 3.50 ಲಕ್ಷ ಹಣವನ್ನು ಕೊಟ್ಟಿರಲಿಲ್ಲ. ಹಿಂದಿನಿಂದಲೂ ಅಡಿಕೆ ಕೊಡುತ್ತಿದ್ದುದರಿಂದ ಆಮೇಲೆ ಹಣ ಕೊಡುವುದಾಗಿ ವ್ಯಾಪಾರಿ ಹೇಳಿದ್ದ.
ಪ್ರವೀಣ್ ಡಿಸೋಜಾ ಆನಂತರ ಹಣವನ್ನು ನೀಡುವಂತೆ ಕೇಳತೊಡಗಿದ್ದರು. ಜೂನ್ 9ರಂದು ರಾತ್ರಿ ಆರೋಪಿ ನೌಫಾಲ್ ತಾನು ನಷ್ಟದಲ್ಲಿದ್ದು, ಬಾಕಿ ಹಣವನ್ನು ಸ್ವಲ್ಪ ಸ್ವಲ್ಪವಾಗಿ ನೀಡುವುದಾಗಿ ಮೆಸೇಜ್ ಮಾಡಿದ್ದ. ಇದರಿಂದ ಗಾಬರಿಗೊಂಡ ಪ್ರವೀಣ್, ಮರು ದಿನವೇ ಬೆಳಗ್ಗೆ ಅಂಗಡಿಗೆ ಹೋಗಿ ನೋಡಿದಾಗ ಬೀಗ ಹಾಕಿದ್ದು, ಮನೆಗೂ ಬೀಗ ಹಾಕಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದೇ ವೇಳೆ, ವ್ಯಾಪಾರಿ ನೌಫಾಲ್ ಜೊತೆಗೆ ಅಡಿಕೆ ವ್ಯಾಪಾರ ಮಾಡಿ, ಹಣ ಪಡೆಯಲು ಬಾಕಿಯಿದ್ದ ಇತರ 24 ಜನರು ಅಂಗಡಿ ಮುಂದೆ ಸೇರಿದ್ದರು.
ಆರೋಪಿ ನೌಫಾಲ್ ತನ್ನೊಂದಿಗೆ ಅಡಿಕೆ ಮತ್ತು ಕರಿಮೆಣಸು ವ್ಯಾಪಾರ ಮಾಡಿಕೊಂಡಿದ್ದವರಿಗೆ ಒಟ್ಟು ರೂ. 94,77,810 /- ನ್ನು ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡುವ ಉದ್ದೇಶದಿಂದ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರವೀಣ್ ಡಿಸೋಜ ದೂರಿನಂತೆ, ಅಕ್ರ: 64/2025 ಕಲಂ: 316(2) 318(4) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ನೌಫಾಲ್ ಮಹಮ್ಮದ್ ಹಲವಾರು ವರ್ಷಗಳಿಂದ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದು ಆಸುಪಾಸಿನ ಕೃಷಿಕರ ವಿಶ್ವಾಸ ಗಳಿಸಿದ್ದ. ಹಣ ಬಾಕಿ ಇರಿಸಿದ್ದರೆ, ಚೀಟಿಯಲ್ಲಿ ಬರೆದು ಕೊಡುತ್ತಿದ್ದ. ಕೇವಲ ವಿಶ್ವಾಸದಿಂದಲೇ ಅಡಿಕೆ ವ್ಯವಹಾರ ನಡೆಯುತ್ತಿತ್ತು. ವ್ಯಾಪಾರಿಯೇ ಸಾಕಷ್ಟು ಕೃಷಿಕರ ಮನೆಗೆ ತೆರಳಿ ಅಡಿಕೆಯನ್ನು ತನ್ನ ವಾಹನದಲ್ಲಿ ತುಂಬಿಸಿ ತರುತ್ತಿದ್ದ. ಆದರೆ ಕೆಲವು ಸಮಯಗಳಿಂದ ಹೀಗೆ ತಂದಿದ್ದ ಅಡಿಕೆಗೆ ಪ್ರತಿಯಾಗಿ ಹಣವನ್ನು ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೆಲವರಿಗೆ 30 ಲಕ್ಷಕ್ಕೂ ಹೆಚ್ಚಿನ ಮತ್ತು ಇನ್ನು ಕೆಲವರಿಗೆ 50 ಸಾವಿರ ರೂ.ಗಳಷ್ಟು ವಂಚಿಸಿದ್ದಾನೆ ಎಂದು ತಿಳಿದುಬಂದಿದೆ.
Mangalore Arecanut Trader Cheats Over 50 Farmers of Crores, Shop Locked, Accused Absconds After Massive Fraud in Bantwal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm