ಬ್ರೇಕಿಂಗ್ ನ್ಯೂಸ್
11-06-25 07:26 pm Mangalore Correspondent ಕ್ರೈಂ
ಮಂಗಳೂರು, ಜೂನ್ 11 : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿ, ಆರೋಪಿಗಳು ಕೈಗೆ ಸಿಗದೇ ಇದ್ದಾಗ ಹಣಕ್ಕಾಗಿ ಪೀಡಿಸಿ ಆಡಿಯೋದಲ್ಲಿ ಸಿಕ್ಕಿಬಿದ್ದ ವಿಟ್ಲ ಠಾಣೆಯ ಪಿಎಸ್ಐ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕರ್ತವ್ಯದಿಂದ ಅಮಾನತುಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಗಾರಿ ನಡೆಸುತ್ತಿದ್ದವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಟ್ಲ ಠಾಣೆ ಪಿಎಸ್ಐ ಬಿ.ಸಿ ಕೌಶಿಕ್ ಅಮಾನತು ಆದವರು.
ಮೇ ತಿಂಗಳ 8ರಂದು ವಿಟ್ಲ ಪೇಟೆ ಬಳಿಯ ಪಳಿಕೆ ಎಂಬಲ್ಲಿ ನಾಲ್ವರು ಯುವಕರು ಜುಗಾರಿ ಆಡುತ್ತಿದ್ದ ಮಾಹಿತಿ ಪಡೆದ ವಿಟ್ಲ ಠಾಣೆ ಪಿಎಸೈ ಬಿ.ಸಿ.ಕೌಶಿಕ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಈ ವೇಳೆ, ಅಲ್ಲಿದ್ದವರು ಪರಾರಿಯಾಗಿದ್ದರೆ, ದ್ವಿಚಕ್ರ ವಾಹನ ಒಂದನ್ನು ಬಿಟ್ಟು ಹೋಗಿದ್ದರು. ಆರೋಪಿಗಳು ಯಾರೆಂದು ತಿಳಿದು ಒಬ್ಬಾತನಿಗೆ ಕರೆ ಮಾಡಿದ್ದ ಎಸೈ ಕೌಶಿಕ್, ಸ್ಕೂಟರ್ ಬಿಡಿಸಿಕೊಂಡು ಹೋಗಲು ಠಾಣೆಗೆ ಬಾ.. ಇಲ್ಲದಿದ್ದರೆ ಮನೆಗೆ ನುಗ್ಗುತ್ತೇನೆಂದು ಬೆದರಿಸಿದ್ದರು.
ಆ ವ್ಯಕ್ತಿ ಮತ್ತೆ ಎಸ್ಐ ಕೌಶಿಕ್ ಅವರಿಗೆ ಮೊಬೈಲ್ ಮೂಲಕ ಸಂಪರ್ಕಿಸಿ ವಿಚಾರಿಸಿದಾಗ, ಕ್ರಿಮಿನಲ್ ಹಿನ್ನೆಲೆಯ ಜಮಾಲ್ ಎಂಬಾತನ ಬಳಿ ಹೋಗಿ ಮಾತಾಡಿ ಸೆಟ್ಲ್ ಮಾಡ್ಕೊಳ್ಳುವಂತೆ ಹೇಳಿದ್ದರು. ಅದೇ ಯುವಕ, ಜಮಾಲ್ ಬಳಿ ಮಾತಾಡಿದಾಗ ಮೂವತ್ತು ಸಾವಿರ ಕೊಡು. ಸ್ಟೇಶನ್ ಕೊಡಲಿಕ್ಕಿದೆ, ಎಲ್ಲವನ್ನೂ ಮುಗಿಸುತ್ತೇನೆ ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಎಸ್ಐ ಮತ್ತು ಜಮಾಲ್ ಜೊತೆಗೆ ಸರ್ಫುದ್ದೀನ್ ಎಂಬಾತ ಸಂಭಾಷಣೆ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐ ಬಿ.ಸಿ.ಕೌಶಿಕ್ ಅವರನ್ನು ಈ ಹಿಂದಿನ ಎಸ್ಪಿ ಯತೀಶ್, ಅಮಾನತು ಮಾಡಿ ಇಲಾಖಾ ತನಿಖೆಗೆ ಆದೇಶಿಸಿದ್ದರು.
ಆನಂತರ, ಎಸ್ಪಿ ಯತೀಶ್ ವರ್ಗಾವಣೆಯಾಗಿದ್ದರಿಂದ ಇಲಾಖಾ ತನಿಖೆ ಆಗಿರಲಿಲ್ಲ. ಇಲಾಖಾ ತನಿಖೆಯ ಹೊಣೆಯನ್ನು ಸುಳ್ಯದ ಇನ್ಸ್ ಪೆಕ್ಟರ್ ತಿಮ್ಮಪ್ಪ ಕುಲಾಲ್ ಗೆ ವಹಿಸಲಾಗಿತ್ತು. ಒಂದು ತಿಂಗಳ ಬಳಿಕ ಜೂನ್ 9ರಂದು ಇಲಾಖಾ ತನಿಖೆ ಹಿನ್ನೆಲೆಯಲ್ಲಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆಂದು ಆರೋಪಿಸಿದ್ದ ಸರ್ಫುದ್ದೀನ್, ಮಧ್ಯವರ್ತಿ ಜಮಾಲ್, ಮತ್ತು ಜೂಜು ಅಡ್ಡೆಗೆ ದಾಳಿ ನಡೆಸಿದ್ದ ಇತರ ಸಿಬಂದಿಯನ್ನು ತನಿಖೆಗೆ ಒಳಪಡಿಸಲಾಗಿದೆ. ಹೀಗಾಗಿ ಒಂದು ತಿಂಗಳ ಬಳಿಕ ಪಿಎಸ್ ಐ ಅಮಾನತು ಸುದ್ದಿ ಹೊರ ಬಂದಿದೆ.
ಪೊಲೀಸರ ಬ್ರೋಕರ್ ಆಗಿ ಪೋಸು ನೀಡುತ್ತಿರುವ ಜಮಾಲ್ ವಿಟ್ಲದ್ದೇ ನಿವಾಸಿಯಾಗಿದ್ದು ನಟೋರಿಯಸ್ ಹನಿಟ್ರ್ಯಾಪ್ ಬ್ಲಾಕ್ಮೇಲರ್. ಕೊಡಗಿನ ಪಿರಿಯಾಪಟ್ಟಣದಲ್ಲಿ ಮೂರು ವರ್ಷಗಳ ಹಿಂದೆ ಕೇರಳದ ಉದ್ಯಮಿಯೊಬ್ಬನ ಹನಿಟ್ರ್ಯಾಪ್ ನಡೆಸಿದ್ದ ಜಮಾಲ್ ಲಕ್ಷಗಟ್ಟಲೆ ಸುಲಿಗೆ ಮಾಡಿ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದ. ಆನಂತರ, ಅದೇ ಕೇರಳದ ವ್ಯಕ್ತಿ ಬೇರೊಬ್ಬರ ಮುಖಾಂತರ ಜಮಾಲ್ ನನ್ನು ಬರಮಾಡಿಕೊಂಡು ಚೆನ್ನಾಗಿ ಉಪಚರಿಸಿ ಕಳಿಸಿದ್ದ. ಇದರಿಂದ ಆರು ತಿಂಗಳ ಕಾಲ ಆಸ್ಪತ್ರೆಯಲ್ಲಿ ನರಳಾಡಿದ್ದ ಜಮಾಲ್ ಮತ್ತೆ ಚಾಳಿ ಮುಂದುವರಿಸಿ, ಉಪ್ಪಿನಂಗಡಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ನಡೆಸಿ ಜೈಲು ಸೇರಿದ್ದ. ಪೊಲೀಸರ ಜೊತೆಗೂ ಬ್ರೋಕರ್ ಕೆಲಸ ಮಾಡುತ್ತಿದ್ದು ಈತನ ಅಸಲಿತನ ಅರಿಯದ ಎಸೈ ಬಿ.ಸಿ.ಕೌಶಿಕ್ ಹಣದ ಹಿಂದೆ ಹೋಗಿ ಅಮಾನತು ಆಗಬೇಕಾಗಿ ಬಂದಿದೆ.
In a startling development, Vittal Police Sub-Inspector B.C. Kaushik has been suspended after an alleged bribe demand came to light through a leaked audio recording. The incident, which occurred following a gambling raid in May, has triggered departmental action against multiple individuals, including middlemen allegedly operating between the accused and police officers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm