ಬ್ರೇಕಿಂಗ್ ನ್ಯೂಸ್
11-06-25 07:26 pm Mangalore Correspondent ಕ್ರೈಂ
ಮಂಗಳೂರು, ಜೂನ್ 11 : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿ, ಆರೋಪಿಗಳು ಕೈಗೆ ಸಿಗದೇ ಇದ್ದಾಗ ಹಣಕ್ಕಾಗಿ ಪೀಡಿಸಿ ಆಡಿಯೋದಲ್ಲಿ ಸಿಕ್ಕಿಬಿದ್ದ ವಿಟ್ಲ ಠಾಣೆಯ ಪಿಎಸ್ಐ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕರ್ತವ್ಯದಿಂದ ಅಮಾನತುಗೊಳಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಗಾರಿ ನಡೆಸುತ್ತಿದ್ದವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಟ್ಲ ಠಾಣೆ ಪಿಎಸ್ಐ ಬಿ.ಸಿ ಕೌಶಿಕ್ ಅಮಾನತು ಆದವರು.
ಮೇ ತಿಂಗಳ 8ರಂದು ವಿಟ್ಲ ಪೇಟೆ ಬಳಿಯ ಪಳಿಕೆ ಎಂಬಲ್ಲಿ ನಾಲ್ವರು ಯುವಕರು ಜುಗಾರಿ ಆಡುತ್ತಿದ್ದ ಮಾಹಿತಿ ಪಡೆದ ವಿಟ್ಲ ಠಾಣೆ ಪಿಎಸೈ ಬಿ.ಸಿ.ಕೌಶಿಕ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಈ ವೇಳೆ, ಅಲ್ಲಿದ್ದವರು ಪರಾರಿಯಾಗಿದ್ದರೆ, ದ್ವಿಚಕ್ರ ವಾಹನ ಒಂದನ್ನು ಬಿಟ್ಟು ಹೋಗಿದ್ದರು. ಆರೋಪಿಗಳು ಯಾರೆಂದು ತಿಳಿದು ಒಬ್ಬಾತನಿಗೆ ಕರೆ ಮಾಡಿದ್ದ ಎಸೈ ಕೌಶಿಕ್, ಸ್ಕೂಟರ್ ಬಿಡಿಸಿಕೊಂಡು ಹೋಗಲು ಠಾಣೆಗೆ ಬಾ.. ಇಲ್ಲದಿದ್ದರೆ ಮನೆಗೆ ನುಗ್ಗುತ್ತೇನೆಂದು ಬೆದರಿಸಿದ್ದರು.
ಆ ವ್ಯಕ್ತಿ ಮತ್ತೆ ಎಸ್ಐ ಕೌಶಿಕ್ ಅವರಿಗೆ ಮೊಬೈಲ್ ಮೂಲಕ ಸಂಪರ್ಕಿಸಿ ವಿಚಾರಿಸಿದಾಗ, ಕ್ರಿಮಿನಲ್ ಹಿನ್ನೆಲೆಯ ಜಮಾಲ್ ಎಂಬಾತನ ಬಳಿ ಹೋಗಿ ಮಾತಾಡಿ ಸೆಟ್ಲ್ ಮಾಡ್ಕೊಳ್ಳುವಂತೆ ಹೇಳಿದ್ದರು. ಅದೇ ಯುವಕ, ಜಮಾಲ್ ಬಳಿ ಮಾತಾಡಿದಾಗ ಮೂವತ್ತು ಸಾವಿರ ಕೊಡು. ಸ್ಟೇಶನ್ ಕೊಡಲಿಕ್ಕಿದೆ, ಎಲ್ಲವನ್ನೂ ಮುಗಿಸುತ್ತೇನೆ ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಎಸ್ಐ ಮತ್ತು ಜಮಾಲ್ ಜೊತೆಗೆ ಸರ್ಫುದ್ದೀನ್ ಎಂಬಾತ ಸಂಭಾಷಣೆ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಐ ಬಿ.ಸಿ.ಕೌಶಿಕ್ ಅವರನ್ನು ಈ ಹಿಂದಿನ ಎಸ್ಪಿ ಯತೀಶ್, ಅಮಾನತು ಮಾಡಿ ಇಲಾಖಾ ತನಿಖೆಗೆ ಆದೇಶಿಸಿದ್ದರು.
ಆನಂತರ, ಎಸ್ಪಿ ಯತೀಶ್ ವರ್ಗಾವಣೆಯಾಗಿದ್ದರಿಂದ ಇಲಾಖಾ ತನಿಖೆ ಆಗಿರಲಿಲ್ಲ. ಇಲಾಖಾ ತನಿಖೆಯ ಹೊಣೆಯನ್ನು ಸುಳ್ಯದ ಇನ್ಸ್ ಪೆಕ್ಟರ್ ತಿಮ್ಮಪ್ಪ ಕುಲಾಲ್ ಗೆ ವಹಿಸಲಾಗಿತ್ತು. ಒಂದು ತಿಂಗಳ ಬಳಿಕ ಜೂನ್ 9ರಂದು ಇಲಾಖಾ ತನಿಖೆ ಹಿನ್ನೆಲೆಯಲ್ಲಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆಂದು ಆರೋಪಿಸಿದ್ದ ಸರ್ಫುದ್ದೀನ್, ಮಧ್ಯವರ್ತಿ ಜಮಾಲ್, ಮತ್ತು ಜೂಜು ಅಡ್ಡೆಗೆ ದಾಳಿ ನಡೆಸಿದ್ದ ಇತರ ಸಿಬಂದಿಯನ್ನು ತನಿಖೆಗೆ ಒಳಪಡಿಸಲಾಗಿದೆ. ಹೀಗಾಗಿ ಒಂದು ತಿಂಗಳ ಬಳಿಕ ಪಿಎಸ್ ಐ ಅಮಾನತು ಸುದ್ದಿ ಹೊರ ಬಂದಿದೆ.
ಪೊಲೀಸರ ಬ್ರೋಕರ್ ಆಗಿ ಪೋಸು ನೀಡುತ್ತಿರುವ ಜಮಾಲ್ ವಿಟ್ಲದ್ದೇ ನಿವಾಸಿಯಾಗಿದ್ದು ನಟೋರಿಯಸ್ ಹನಿಟ್ರ್ಯಾಪ್ ಬ್ಲಾಕ್ಮೇಲರ್. ಕೊಡಗಿನ ಪಿರಿಯಾಪಟ್ಟಣದಲ್ಲಿ ಮೂರು ವರ್ಷಗಳ ಹಿಂದೆ ಕೇರಳದ ಉದ್ಯಮಿಯೊಬ್ಬನ ಹನಿಟ್ರ್ಯಾಪ್ ನಡೆಸಿದ್ದ ಜಮಾಲ್ ಲಕ್ಷಗಟ್ಟಲೆ ಸುಲಿಗೆ ಮಾಡಿ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದ. ಆನಂತರ, ಅದೇ ಕೇರಳದ ವ್ಯಕ್ತಿ ಬೇರೊಬ್ಬರ ಮುಖಾಂತರ ಜಮಾಲ್ ನನ್ನು ಬರಮಾಡಿಕೊಂಡು ಚೆನ್ನಾಗಿ ಉಪಚರಿಸಿ ಕಳಿಸಿದ್ದ. ಇದರಿಂದ ಆರು ತಿಂಗಳ ಕಾಲ ಆಸ್ಪತ್ರೆಯಲ್ಲಿ ನರಳಾಡಿದ್ದ ಜಮಾಲ್ ಮತ್ತೆ ಚಾಳಿ ಮುಂದುವರಿಸಿ, ಉಪ್ಪಿನಂಗಡಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ನಡೆಸಿ ಜೈಲು ಸೇರಿದ್ದ. ಪೊಲೀಸರ ಜೊತೆಗೂ ಬ್ರೋಕರ್ ಕೆಲಸ ಮಾಡುತ್ತಿದ್ದು ಈತನ ಅಸಲಿತನ ಅರಿಯದ ಎಸೈ ಬಿ.ಸಿ.ಕೌಶಿಕ್ ಹಣದ ಹಿಂದೆ ಹೋಗಿ ಅಮಾನತು ಆಗಬೇಕಾಗಿ ಬಂದಿದೆ.
In a startling development, Vittal Police Sub-Inspector B.C. Kaushik has been suspended after an alleged bribe demand came to light through a leaked audio recording. The incident, which occurred following a gambling raid in May, has triggered departmental action against multiple individuals, including middlemen allegedly operating between the accused and police officers.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm