ಬ್ರೇಕಿಂಗ್ ನ್ಯೂಸ್
12-06-25 12:31 pm HK News Desk ಕ್ರೈಂ
ಪಣಜಿ, ಜೂ 12 : ಬಕ್ರೀದ್ ಪಾರ್ಟಿಗೆ ಬರಲು ಹೇಳಿ ಮೂವರು ಅಪ್ರಾಪ್ತ ಬಾಲಕಿಯರನ್ನ ಕರೆಸಿ ಇಬ್ಬರು ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೋಟೆಲ್ ಮಾಲಕ, ಮ್ಯಾನೇಜರ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಬಾಲಕಿಯರ ಪೋಷಕರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಬಾಲಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳ ಪರಿಚಯವಾಗಿದ, ಪ್ರತಿನಿತ್ಯ ಚಾಟಿಂಗ್ ನಲ್ಲಿ ತೊಡಗಿಕೊಂಡಿದ್ದ ಬಾಲಕಿಯರಿಗೆ, ಬಕ್ರಿದ್ ಹಬ್ಬಕ್ಕೆ ಪಾರ್ಟಿ ಇದೆ ಮಸ್ತಿ ಮಾಡೋಣ ಬನ್ನಿ ಎಂದು ಆರೋಪಿಗಳು ಕರೆದಿದ್ದಾರೆ. ಪಾರ್ಟಿಗೆ ಹೋದ ಬಾಲಕಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದು ನಂತರ ಸೋಶಿಯಲ್ ಮೀಡಿಯಾ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದಾರೆ.
ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರನ್ನ ಹುಡುಕಲು ಹಲವಾರು ತಂಡಗಳನ್ನು ರಚಿಸಿದ್ದು ನಂತರ ಅದೇ ದಿನ ಕ್ಯಾಲಂಗುಟ್ ಬೀಚ್ನ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದ್ದಾರೆ. ಅತ್ಯಾಚಾರವೆಸಗಿದ ಆರೋಪಿಗಳಾದ ಅಲ್ತಾಫ್ (19) ಮತ್ತು ಓಂ (21)ನನ್ನ ಪೊಲೀಸರು ಲಾಕ್ ಮಾಡಿದ್ದಾರೆ.
ಪೊಲೀಸರ ಬಳಿ ಘಟನೆ ಬಗ್ಗೆ ಮಾಹಿತಿ ನೀಡಿರುವ ಬಾಲಕಿಯರು, ಇಬ್ಬರು ಆರೋಪಿಗಳು ಈದ್ ಆಚರಣೆಗೆಂದು ನಮ್ಮನ್ನ ಹೋಟೆಲಿಗೆ ಬರುವಂತೆ ಹೇಳಿದರು. ನಂತರ ಹೋಟೆಲ್ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಯಿಬಿಟ್ಟಿದ್ದಾರೆ.
ಇನ್ನು ಅಪ್ರಾಪ್ತ ಬಾಲಕಿಯರಿಗೆ ರೂಮ್ ಕೊಟ್ಟಿದ್ದನ್ನ ಪ್ರಶ್ನಿಸಿ ಹೋಟೆಲ್ ಮಾಲೀಕ ಮತ್ತು ಮ್ಯಾನೇಜರ್ ನನ್ನ ಪೊಲೀಸ್ರು ಬಂಧಿಸಿ ಗ್ರಹಚಾರ ಬಿಡಿಸಿದ್ದಾರೆ.
Three Minors Lured to Birthday Party, Later raped; Three Arrested in Goa including hotel owner. In a shocking incident reported from Goa, three underage girls were allegedly abused after being invited to a birthday celebration by acquaintances. The incident, which occurred on June 8, has led to the arrest of two young men and a hotel owner.
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 12:25 pm
HK News Desk
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
Former Gujarat CM Vijay Rupani: ವಿಮಾನ ದುರಂತ ;...
12-06-25 06:48 pm
Gujarat Plane Crash Tragedy, Update: ಗುಜರಾತ್...
12-06-25 05:13 pm
13-06-25 09:38 am
Mangalore Correspondent
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm