ಬ್ರೇಕಿಂಗ್ ನ್ಯೂಸ್
14-06-25 05:59 pm Bengaluru Staff ಕ್ರೈಂ
ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಭ್ರಷ್ಟರ ಹೆಡೆಮುರಿ ಕಟ್ಟಿ ಸ್ವಸ್ಥ ಸಮಾಜ ಕಟ್ಟುವ ಗುರುತರ ಜವಾಬ್ದಾರಿ ಹೊತ್ತಿರುವ ಲೋಕಾಯುಕ್ತ ಅಧಿಕಾರಿಗಳೇ ಕೋಟಿ ಕೋಟಿ ಕೊಳ್ಳೆ ಹೊಡೆಯುತ್ತಿರುವ ಆರೋಪ ಕೇಳಿಬಂದಿದೆ. ಐಪಿಎಸ್ ಅಧಿಕಾರಿಯೂ ಆಗಿರುವ, ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಮಹದೇವ ಶ್ರೀನಾಥ ಜೋಶಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಅಧಿಕಾರಿಗಳೇ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಅಕ್ರಮ ಆಸ್ತಿ ಗಳಿಸಿರುವ ವಿಚಾರದಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಲೋಕಾಯುಕ್ತದಿಂದ ದಾಳಿ ನಡೆಸುವುದಾಗಿ ಬೆದರಿಸಿ ಹಣ ಕೀಳುತ್ತಿದ್ದ ಆರೋಪದಲ್ಲಿ ಕೆಎಸ್ಸಾರ್ಪಿಯ ಮಾಜಿ ಕಾನ್ಸ್ ಟೇಬಲ್ ನಿಂಗಪ್ಪ ಎಂಬಾತನನ್ನು ಲೋಕಾಯುಕ್ತ ಬಂಧಿಸಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಹಿರಿಯ ಅಧಿಕಾರಿಗಳೊಂದಿಗೆ ನಂಟು ಇರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಬೆಂಗಳೂರು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಅವರನ್ನು ಲೋಕಾಯುಕ್ತದಿಂದಲೇ ತೆಗೆದು ಹಾಕಲಾಗಿದೆ.
ನಿಂಗಪ್ಪ ಎಂಬ ವ್ಯಕ್ತಿ ತಾನು ಲೋಕಾಯುಕ್ತ ಡಿವೈಎಸ್ಪಿ ಎಂದು ಹೇಳಿ ಪರಿಚಯ ಮಾಡಿಕೊಂಡು ಬೆಂಗಳೂರು ಸೇರಿ ರಾಜ್ಯದಲ್ಲಿ ಬೇರೆ ಬೇರೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ದಾಳಿ ಮಾಡುವುದಾಗಿ ಬೆದರಿಸುತ್ತಿದ್ದ. ಈ ವೇಳೆ, ಡೀಲ್ ಕುದುರಿಸುತ್ತಿದ್ದ ನಿಂಗಪ್ಪ ಅದರ ಪಾಲನ್ನು ಲೋಕಾಯುಕ್ತದ ಅಸಲಿ ಅಧಿಕಾರಿಗಳಿಗೆ ಕೊಡುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ನಿಂಗಪ್ಪ ಮತ್ತು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾತನಾಡಿರುವ ಕಾಲ್ ಡಿಟೈಲ್ಸ್ ಸಿಕ್ಕಿದ್ದು, ಅದರಲ್ಲಿ ಭ್ರಷ್ಟಾಚಾರದ ರಹಸ್ಯ ಅಡಗಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ, ಈ ರೀತಿ ಭ್ರಷ್ಟಾಚಾರದಲ್ಲಿ ಗಳಿಸಿದ ಅಕ್ರಮ ಸಂಪತ್ತನ್ನು ಕಾನೂನು ಕಣ್ಣಿನಿಂದ ಮತ್ತು ತೆರಿಗೆ ತಪ್ಪಿಸಲು ಬಿಟ್ ಕಾಯಿನ್ ಮೇಲೆ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿಯೂ ಇದೆ. ಶ್ರೀನಾಥ್ ಜೋಷಿ ಅವರಲ್ಲದೆ, ಓರಗೆಯ ಇನ್ನೊಬ್ಬ ಐಪಿಎಸ್ ಅಧಿಕಾರಿಯೂ ಇದೇ ರೀತಿ ಅಕ್ರಮ ಹಣ ಮಾಡಿದ್ದಾರೆಂಬ ಆರೋಪ ಇದೆ. ಈ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ಬರುತ್ತಲೇ ಆರೋಪ ಹೊತ್ತವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಅವರ ಮೇಲೆ ಕ್ರಮ ಜರುಗಿಸುವ ಬದಲು ಮೃದು ಧೋರಣೆ ತಳೆದಿದ್ದಾರೆ ಎನ್ನುವ ವಿಚಾರವೂ ಚರ್ಚೆಗೀಡಾಗಿದೆ. ಇದೊಂದು ರೀತಿಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದ್ದು, ಹೈಕೋರ್ಟ್ ನಿಂದ ಫುಲ್ ಪವರ್ ಪಡೆದು ಮೀಸೆ ತಿರುವಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳ ಬಗ್ಗೆ ಸಾರ್ವಜನಿಕ ನೆಲೆಯಲ್ಲಿ ಅನುಮಾನ ತೋರುವಂತಾಗಿದೆ.
ಬಿಡಿಎ ಮತ್ತು ಅಬಕಾರಿ ಇಲಾಖೆಗಳ ಅಧಿಕಾರಿಗಳಿಗೆ ಕರೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ತಂಡವು ನಿಂಗಪ್ಪನನ್ನು ಬಂಧಿಸಿ ವಿಚಾರಣೆ ಕೈಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ. ಇಲಾಖೆಯ ಹಿರಿಯ ಅಧಿಕಾರಿಗಳೇ ನಿಂಗಪ್ಪ ಜೊತೆಗೆ ಶಾಮೀಲಾಗಿದ್ದಾರೆಂಬ ಮಾಹಿತಿ ದೊರಕಿದೆ.
In a stunning twist that has sent shockwaves across Karnataka’s administrative and anti-corruption circles, senior Lokayukta officials, including Bengaluru City Lokayukta SP Mahadev Srinath Joshi (an IPS officer), have come under the scanner for alleged involvement in a multi-crore extortion racket.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm