ಬ್ರೇಕಿಂಗ್ ನ್ಯೂಸ್
20-06-25 02:04 pm Mangalore Correspondent ಕ್ರೈಂ
ಉಡುಪಿ, ಜೂನ್ 20 : ಪತ್ನಿ ಇಡೀ ದಿನ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿರಾಯ, ಅದೇ ವಿಷಯದಲ್ಲಿ ಜಗಳಕ್ಕಿಳಿದು ಕತ್ತಿಯಿಂದ ಕಡಿದು ಪತ್ನಿಯನ್ನೇ ಕೊಲೆಗೈದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.
ಮೃತರನ್ನು ಹೊಸಮಠ ನಿವಾಸಿ ರೇಖಾ(27) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಆಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ ಗಣೇಶ ಪೂಜಾರಿ(42) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗಣೇಶ್ ಪೂಜಾರಿ ವಿಪರೀತ ಮದ್ಯವ್ಯಸನದ ಚಟ ಹೊಂದಿದ್ದ. ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ವಿಪರೀತ ಕುಡಿದು ಗುರುವಾರ ರಾತ್ರಿ ಮನೆಯಲ್ಲಿ ಜಗಳಕ್ಕಿಳಿದಿದ್ದು ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.



ವೃತ್ತಿಯಲ್ಲಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಗೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ರೇಖಾ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸಕ್ಕಿದ್ದಳು. ಈ ಮಧ್ಯೆ ಗಣೇಶ್, ಆಕೆಯ ಮೊಬೈಲ್ ಗೀಳಿನ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿ 11.30ರ ವೇಳೆಗೆ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಮಾಡಿದ್ದು ಕತ್ತಿಯಿಂದ ಕಡಿದಿದ್ದಾನೆ. ಗಂಭೀರ ಗಾಯಗೊಂಡ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮನೆಯಿಂದ ಓಡಿ ಹೋಗಿದ್ದ ಆರೋಪಿ ಗಣೇಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking and tragic incident, a man brutally murdered his wife over a dispute about her frequent use of a mobile phone. The incident occurred on Thursday night in Hosamatha village, near Hiliyala in Brahmavar Taluk. The deceased has been identified as Rekha (27), a resident of Hosamatha and an employee at a petrol bunk. The accused, her husband Ganesh Poojary (42) from Kolambe village, has been taken into custody by the Shankaranarayana police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm