ಬ್ರೇಕಿಂಗ್ ನ್ಯೂಸ್
21-06-25 08:58 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಧರ್ಮಸ್ಥಳದ ಸೌಜನ್ಯಾ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಅಸಹಾಯಕರಿಗೆ ನೆರವು ನೀಡುವ ನೆಪದಲ್ಲಿ ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಅಲಿಯಾಸ್ ಪವಿತ್ರ ನಾಗರಾಜ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಬಳಿಯ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್ ಅವರಿಗೆ ಪವಿತ್ರಾ ನಾಗರಾಜ್ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಳು. ಸೌಜನ್ಯಾ ಹೆಲ್ಪ್ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಎಂದು ಪೋಸು ಕೊಟ್ಟು ರಾಜೇಶ್ ಅವರನ್ನು ನಂಬಿಸಿದ್ದಾಳೆ.
ರಾಜೇಶ್ ಅವರು ಬಂಟ್ವಾಳ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾಗೆ ತಿಳಿಸಿದ್ದಾರೆ. ಅದನ್ನು ಹೈಕೋರ್ಟ್ ಹಾಕಿ ಎಫ್ಐಆರ್ ರದ್ದುಪಡಿಸುತ್ತೇನೆ. ಅದಕ್ಕೆ ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ 2025ರ ಫೆಬ್ರವರಿ- ಮೇ ತಿಂಗಳಲ್ಲಿ ಹಂತ ಹಂತವಾಗಿ 3.20 ಲಕ್ಷ ರೂ. ಹಣ ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.
ಈ ವೇಳೆ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಕೇಳಿದ್ದಾಳೆ. ಇದರಿಂದ ಸಂಶಯಗೊಂಡ ರಾಜೇಶ್ ಅವರು ಹೈಕೋರ್ಟಿಗೆ ಸಲ್ಲಿಸಿರುವ ದಾಖಲೆಗಳನ್ನು ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಸಂಧ್ಯಾ ಉಲ್ಟಾ ಮಾತನಾಡಿದ್ದು ಅವಾಚ್ಯ ಶಬ್ದಗಳಿಂದ ಬೈದು ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ರಾಜೇಶ್ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದು ಬಿಎನ್ಎಸ್ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದೇ ಪವಿತ್ರಾ ನಾಗರಾಜ್ ಈ ಹಿಂದೆ ಚಳವಳಿ, ಹೋರಾಟದ ನೆಪದಲ್ಲಿ ಹತ್ತಿರವಾಗಿ ಎಸ್ಡಿಪಿಐ ಮುಖಂಡ ಬಿಆರ್ ಭಾಸ್ಕರ ಪ್ರಸಾದ್ ಅವರನ್ನು ಹನಿಟ್ರ್ಯಾಪ್ ಮಾಡಿ, ಆ ಬಗ್ಗೆಯೂ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿ ಬಂಧಿತಳಾಗಿದ್ದಳು.
A woman who operated under the alias Pavithra Nagaraj has been booked by Poonjalkatte Police in Mangalore for allegedly defrauding a man from Belthangady by posing as a social worker helping people in distress
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm