ಬ್ರೇಕಿಂಗ್ ನ್ಯೂಸ್
26-06-25 05:32 pm Mangalore Correspondent ಕ್ರೈಂ
ಮಂಗಳೂರು, ಜೂನ್ 26 : ಹೆತ್ತ ತಾಯಿಯನ್ನು ಮಗನೇ ಕೊಲೆಗೈದು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಗಡಿಭಾಗ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದಿದೆ.
ವರ್ಕಾಡಿ ಪಂಚಾಯತ್ ವ್ಯಾಪ್ತಿಯ ನಲ್ಲೆಂಗಿ ಪದವು ನಿವಾಸಿ ಹಿಲ್ಡಾ ಮೊಂತೇರೊ (59) ಕೊಲೆಗೀಡಾದ ದುರ್ದೈವಿ. ಆಕೆಯ ಮಗ ಮೆಲ್ವಿನ್ ಮೊಂತೇರೊ (26) ಕೃತ್ಯ ಎಸಗಿರುವ ಆರೋಪಿಯಾಗಿದ್ದು ಕೃತ್ಯದ ಬಳಿಕ ಮನೆ ಬಿಟ್ಟು ನಾಪತ್ತೆಯಾಗಿದ್ದ. ಆರೋಪಿ ಯುವಕನನ್ನು ಕುಂದಾಪುರದಲ್ಲಿ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ತಾಯಿಗೆ ಬೆಂಕಿ ಹಚ್ಚಿದ ಬಳಿಕ ನೆರೆಮನೆಯಲ್ಲಿ ವಾಸವಿರುವ ಸಂಬಂಧಿಕ ಮಹಿಳೆ ಲೋಲಿಟಾ(30) ಅವರನ್ನು ಕರೆದಿದ್ದಾನೆ. ತಾಯಿ ಕಾಣಿಸುತ್ತಿಲ್ಲ, ಎಲ್ಲಿಗೋ ಹೋಗಿದ್ದಾರೆ ಅಂತ ಹೇಳಿದ್ದಾನೆ. ಆಕೆ ಮನೆ ಒಳಗಡೆ ಬಂದು ಹಿಂತಿರುಗಿ ಹೋಗುತ್ತಿದ್ದಾಗ ಆಕೆಯ ಮೇಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಹಿಳೆಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಮಹಿಳೆಯ ಗಂಡ ವಿದೇಶದಲ್ಲಿದ್ದು ಐದು ವರ್ಷದ ಮಗ ಜೊತೆಗಿದ್ದ. ಲೋಲಿಟಾ ಅವರ ಬೊಬ್ಬೆ ಕೇಳಿ ಪರಿಸರದ ನಿವಾಸಿಗಳು ಬಂದಿದ್ದು ಆಕೆಯನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ತೀವ್ರ ಸುಟ್ಟ ಗಾಯಕ್ಕೀಡಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ ನಾಯಕ ಹರ್ಷಾದ್ ವರ್ಕಾಡಿ ತಿಳಿಸಿದ್ದಾರೆ.
ಘಟನೆ ಬಳಿಕ ಮೆಲ್ವಿನ್ ಅಲ್ಲಿಂದ ಎರಡು ಕಿಮೀ ದೂರದ ಮಜಿರ್ಪಳ್ಳ ವರೆಗೆ ನಡೆದು ಹೋಗಿದ್ದು ಅಲ್ಲಿಂದ ಆಟೋ ಹಿಡಿದು ಹೊಸಂಗಡಿ ತೆರಳಿದ್ದು ಆಟೋದವರಲ್ಲಿ ಬಸ್ ಎಷ್ಟೊತ್ತಿಗೆ ಇದೆಯೆಂದು ವಿಚಾರಿಸಿದ್ದಾನೆ. ಅಲ್ಲಿಂದ ಮಂಗಳೂರು ಮೂಲಕ ಕುಂದಾಪುರ ತೆರಳಿದ್ದ ಎನ್ನುವ ಮಾಹಿತಿ ಲಭಿಸಿತ್ತು. ಆತನ ಬಳಿಯಿದ್ದ ಮೊಬೈಲ್ ಲೊಕೇಶನ್ ಆಧರಿಸಿ ಮಂಜೇಶ್ವರ ಪೊಲೀಸರು ಬೆನ್ನು ಹತ್ತಿದ್ದರು. ಮೂರು ಬಸ್ ಗಳನ್ನು ಬದಲಿಸಿ ಹೋಗಿದ್ದು ಕುಂದಾಪುರದಲ್ಲಿ ಇಳಿದು ಸ್ನಾನ ಮಾಡಿ ಮದ್ಯದ ಬಾಟಲಿ ಒಂದನ್ನು ಖರೀದಿಸಿದ್ದಾನೆ. ಅಲ್ಲಿಂದ ಆಟೋ ಒಂದರಲ್ಲಿ ಕುಂದಾಪುರ ಹೊರವಲಯದ ಕೋರೆ ಬಳಿಗೆ ತೆರಳಿದ್ದ. ಪೊಲೀಸರು ಆಟೋ ಚಾಲಕನ ಬಳಿ ಮಾಹಿತಿ ಕೇಳಿದಾಗ, ಎಲ್ಲಿ ತಾನು ಬಿಟ್ಟಿದ್ದೇನೆ ಎನ್ನುವ ಸ್ಥಳ ತೋರಿಸಿದ್ದ. ಅಲ್ಲಿಯೇ ಪರಿಸರದಲ್ಲಿ ಆರೋಪಿ ಮೆಲ್ವಿನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಹಿಲ್ಡಾ ಅವರು ಪುತ್ರ ಮೆಲ್ವಿನ್ ಮೊಂತೆರೋ ಜೊತೆಗೆ ನಲ್ಲೆಂಗಿಯಲ್ಲಿ ವಾಸವಿದ್ದರು. ಇನ್ನೊಬ್ಬ ಪುತ್ರ ಆಲ್ವಿನ್ ಮೊಂತೇರೊ ವಿದೇಶದಲ್ಲಿ ಉದ್ಯೋಗದಲ್ಲಿದ್ದಾನೆ. ಇವರ ತಂದೆ ಲೂಯಿಸ್ ಮೊಂತೇರೋ ಐದು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಬುಧವಾರ ರಾತ್ರಿ ಊಟ ಮಾಡಿ ಮಲಗಿದ್ದ ಹಿಲ್ಡಾರನ್ನು ಮೆಲ್ವಿನ್ ಹೊಡೆದು ಕೊಲೆಗೈದಿದ್ದು ಮೃತದೇಹವನ್ನು ಮನೆಯ ಹಿಂಬದಿ 50 ಮೀಟರ್ ದೂರಕ್ಕೆ ಒಯ್ದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ.
ಕೆಂಪು ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಮೆಲ್ವಿನ್, ಮಾದಕ ವ್ಯಸನಿಯಾಗಿದ್ದ. ಆದರೆ ಅದೇ ನಶೆಯಲ್ಲಿ ಕೊಂದಿದ್ದಾನೆಯೇ ಅಥವಾ ಬೇರಾವುದೇ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident reported from the border area of Kerala’s Kasaragod district, a man allegedly murdered his own mother and attempted to burn her body. The crime took place in Varkady, Manjeshwar taluk, during the early hours of Wednesday. The deceased has been identified as Hilda Montero (59), a resident of Nallengi Padu in Varkady panchayat limits. Her son, Melwin Montero (26), is accused of committing the brutal act. Following the incident, he fled the scene but was later arrested by Manjeshwar police in Kundapura after a swift investigation and tracking operation.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm