ಬ್ರೇಕಿಂಗ್ ನ್ಯೂಸ್
29-06-25 02:26 pm HK News Desk ಕ್ರೈಂ
ತುಮಕೂರು, ಜೂನ್ 29 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತಿಪಟೂರು ತಾಲೂಕಿನ 50 ವರ್ಷದ ಶಂಕರಮೂರ್ತಿ ಎಂಬವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಕಾಡುಶೆಟ್ಟಿಹಳ್ಳಿಯಲ್ಲಿ ಜೂನ್ 24 ರಂದು ಈ ಕೊಲೆ ನಡೆದಿದೆ. ಕೊಲೆಯ ನಂತರ ಶವವನ್ನು ಗೋಣಿಚೀಲದಲ್ಲಿ ತುಂಬಿ ಸುಮಾರು 30 ಕಿಮೀ ಸಾಗಿಸಿ, ತುರುವೇಕೆರೆ ತಾಲೂಕಿನ ದಂಡನಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಮಂಗಳಾ ತಿಪಟೂರು ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇದೇ ವೇಳೆ, ಕರಡಾಳು ಸಂತೆ ಗ್ರಾಮದ ನಾಗರಾಜು ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇವರ ಸಂಬಂಧಕ್ಕೆ ಪತಿ ಶಂಕರಮೂರ್ತಿ ಅಡ್ಡಿಯಾಗಿದ್ದ. ಈ ಕಾರಣಕ್ಕಾಗಿ, ಸುಮಂಗಲಾ ಮತ್ತು ನಾಗರಾಜು ಸೇರಿ ಶಂಕರಮೂರ್ತಿ ಕೊಲೆಗೆ ಯೋಜನೆ ರೂಪಿಸಿದ್ದರು.
ಜೂನ್ 24 ರಂದು ಶಂಕರಮೂರ್ತಿ ತೋಟದ ಮನೆಯಲ್ಲಿ ಒಬ್ಬಂಟಿ ಮಲಗಿದ್ದಾಗ ಸುಮಂಗಲಾ ಮತ್ತು ನಾಗರಾಜು ಆತನ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕೊನೆಗೆ ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ, ಸುಮಾರು 30 ಕಿಮೀ ದೂರದ ತುರುವೇಕೆರೆ ಎಂಬಲ್ಲಿಗೆ ಒಯ್ದು ತೋಟದ ಬಾವಿಗೆ ಎಸೆದಿದ್ದಾರೆ. ಕೃತ್ಯದ ನಂತರ, ಆರೋಪಿಗಳು ಯಾವುದೇ ಶಂಕೆಗೆ ಒಳಗಾಗದಂತೆ ಗ್ರಾಮಕ್ಕೆ ಹಿಂದಿರುಗಿದ್ದರು.
ನೊಣವಿನಕೆರೆ ಪೊಲೀಸರು ತನಿಖೆ ಆರಂಭಿಸಿದ್ದು, ಅಕ್ರಮ ಸಂಬಂಧ ಮಾಹಿತಿ ಆಧರಿಸಿ ಸುಮಂಗಳಾಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಶವವನ್ನು ತೋಟದ ಬಾವಿಯಿಂದ ತೆಗೆಯಲಾಗಿದೆ. ತಿಪಟೂರಿನಲ್ಲಿ ಈ ಘಟನೆ ಸ್ಥಳೀಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
A man was found dead under suspicious circumstances in Kadushetti Halli, a village near Nonavinakere in Tipatur taluk, Tumakuru district. The incident, which occurred on June 24, has led to the detention of the man's wife and one other individual for questioning. The deceased has been identified as 50-year-old Shankaramoorthy, a resident of the village
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm