ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:29 pm
HK News Staffer
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm