ಬ್ರೇಕಿಂಗ್ ನ್ಯೂಸ್
01-07-25 04:36 pm Mangalore Correspondent ಕ್ರೈಂ
ಮಂಗಳೂರು, ಜುಲೈ 1 : 2020ರಲ್ಲಿ ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೊಹಮ್ಮದ್ ಮುಸ್ತಫಾ @ ಮುಸ್ತಾ ಎಂದು ಗುರುತಿಸಲಾಗಿದೆ.
ಆರೋಪಿ ಮೊಹಮ್ಮದ್ ಮುಸ್ತಫಾ 2020ರ ಜೂನ್ 5 ರಂದು ಮುಲ್ಕಿಯ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡಹಗಲೇ ರಸ್ತೆಯಲ್ಲಿ ಅಬ್ದುಲ್ ಲತೀಫ್ ಎಂಬವನನ್ನು ಇತರ ಆರೋಪಿಗಳೊಂದಿಗೆ ಸೇರಿ ಕೊಲೆ ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದಾವೂದ್ ಹಕೀಂ, ಮೊಹಮ್ಮದ್ ಮುಸ್ತಾಫ ಸೇರಿ ಒಟ್ಟು 10 ಮಂದಿ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಆರೋಪಿಗೆ 2020ರ ಅಕ್ಚೋಬರ್ 10 ರಂದು ಹೈಕೋರ್ಟ್ ಜಾಮೀನು ನೀಡಿತ್ತು. 2022ರ ಏಪ್ರಿಲ್ 22ರಂದು ಕೋರ್ಟ್ ಆತನ ಜಾಮೀನು ರದ್ದುಪಡಿಸಿತ್ತು. ಆದರೆ ಆರೋಪಿ ಮುಸ್ತಫಾ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದು ಮೂರು ವರ್ಷ ಒಮಾನ್ ದೇಶದಲ್ಲಿ ಉಳಿದುಕೊಂಡಿದ್ದ. ಆರೋಪಿ ಈಗ ಅಕ್ರಮವಾಗಿ ಒಮನ್ ದೇಶದಿಂದ ನೇಪಾಳದ ಮೂಲಕ ಭಾರತಕ್ಕೆ ಪ್ರವೇಶಿಸಿದ್ದು ಅಲ್ಲಿಂದ ಮುಲ್ಕಿಗೆ ಬಂದಿದ್ದ.
ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕುರಿತು ಸುಳಿವು ಪಡೆದ ಪೊಲೀಸರ ವಿಶೇಷ ತಂಡ ಮೂಲ್ಕಿಯ ಪಕ್ಷಿಕೆರೆ ಬಳಿ ಸೋಮವಾರ ಆತನನ್ನು ಬಂಧಿಸಿದೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆರೋಪಿ ನಕಲಿ ಪಾಸ್ ಪೋರ್ಟ್ ಹೊಂದಿರುವ ಬಗ್ಗೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ವಿರುದ್ಧ ಮೂಲ್ಕಿ ಠಾಣೆಯಲ್ಲಿ 4 ಮತ್ತು ಇತರೆ ಜಿಲ್ಲೆಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಠಾಣೆಗಳಲ್ಲಿ ಮುಸ್ತಫ ವಿರುದ್ಧ ಎರಡು ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿತ್ತು.
An accused in the high-profile Mulki Abdul Latif murder case, who had been absconding abroad for nearly three years using a fake passport, has been arrested by Mangaluru Police. The arrested individual has been identified as Mohammed Mustafa, also known as Musta.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm