ಬ್ರೇಕಿಂಗ್ ನ್ಯೂಸ್
03-07-25 07:09 pm HK News Desk ಕ್ರೈಂ
ಜೈಪುರ, ಜು.03: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಪರಿಣಾಮ ಮಂಟಪದಿಂದಲೇ ವರ ಓಡಿಹೋಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ರಾಜಸ್ಥಾನದ ಪ್ರಸಿದ್ಧ ಫೇರ್ಮಾಂಟ್ ಹೋಟೆಲ್ನಲ್ಲಿ ಅದ್ಧೂರಿ ವಿವಾಹ ನಡೆಯುತ್ತಿತ್ತು. ಇದು ಸೌರಭ್ ಅಹುಜಾ ಎಂಬವನ ಅದ್ದೂರಿ ವಿವಾಹವಾಗಿತ್ತು. ಈ ಸೌರಭ್ ಅಹುಜಾ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಮುಖ್ಯ ಆರೋಪಿಯಾಗಿದ್ದಾನೆ.
15,000 ಕೋಟಿ ರೂಪಾಯಿಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿತ್ತು. ಸೌರಭ್ ಅಹುಜಾ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದಾನೆ.
ಮದುವೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಇ.ಡಿ ಅಧಿಕಾರಿಗಳು ಮಂಟಪಕ್ಕೆ ದಾಳಿ ಮಾಡಿದ್ದಾರೆ. ಆದರೆ 'ಸಪ್ತಪದಿ' ತುಳಿಯುವ ಮುನ್ನ ಇ.ಡಿ ತನ್ನ ಬಂಧನಕ್ಕೆ ಬರುತ್ತಿರುವ ಬಗ್ಗೆ ಅರಿತ ಸೌರಭ್ ಮಂಟಪದಿಂದಲೇ ಪರಾರಿ ಆಗಿದ್ದಾನೆ.
ಮಂಟಪಕ್ಕೆ ಸೌರಭ್ ಬಂಧನಕ್ಕೆ ಬಂದಿದ್ದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿ ಪ್ರಣವೇಂದ್ರ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ಇದಲ್ಲದೆ ಸೌರಭ್ ಎಲ್ಲಿದ್ದಾನೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲು ವಧು, ಅವರ ಕುಟುಂಬ ಸದಸ್ಯರು ಮತ್ತು ಇತರ ನಿಕಟ ಸಂಬಂಧಿಗಳನ್ನು ಪ್ರಶ್ನಿಸಿದ್ದಾರೆ.
ಜೈಪುರಕ್ಕೆ ಬಂದಿದ್ದ ಇ.ಡಿ:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಸ್ವಲ್ಪ ಸಮಯದಿಂದ ಸೌರಬ್ನನ್ನು ಟ್ರ್ಯಾಕ್ ಮಾಡುತ್ತಿತ್ತು. ಮದುವೆ ವೇಳೆಯೇ ಅವನನ್ನು ಬಂಧಿಸುವ ನಿಟ್ಟಿನಲ್ಲಿ ರಾಯ್ಪುರದಿಂದ ಜೈಪುರಕ್ಕೆ ಒಂದು ತಂಡವನ್ನು ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಖ್ಯಾತನಾಮರು ಸೇರಿ ಹಲವರ ಹೆಸರು ಕೂಡ ಹರಿದಾಡಿದೆ. ಬಾಲಿವುಡ್ನಲ್ಲೂ ಈ ಸಂಬಂಧ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಹಿಂದೆ ನಟ ಮತ್ತು ಫಿಟೈಸ್ ಪ್ರಭಾವಿ ಸಾಹಿಲ್ ಖಾನ್ ನನ್ನು ಈ ಹಗರಣ ಸಂಬಂಧ ಬಂಧಿಸಲಾಗಿತ್ತು. ಸದ್ಯ ಜೈಪುರದಲ್ಲಿ ಬಂಧಿತರಾಗಿರುವ ಅರೋಪಿಗಳನ್ನು ವಿಚಾರಣೆ ನಡೆಸಿ, ಸೌರಭ್ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವರದಿ ತಿಳಿಸಿದೆ.
The Enforcement Directorate (ED) team from Raipur, Chhattisgarh, conducted a raid at private hotel located in the Kukas area of Jaipur. The action was taken in connection with the ongoing investigation into the Mahadev Betting App case. According to ED sources, the agency had received a confidential tip-off that several individuals associated with the betting app were staying at the hotel to attend a wedding.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm